ಸುದ್ದಿಬಿಂದು ಬ್ಯೂರೋ ವರದಿ
ಗುಡುಗು-ಸಿಡಿಲಿನ ಭಾರೀ ಆರ್ಭಟದಿಂದ ಆತಂಕಗೊಂಡ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಈ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ವರದಿಯಾಗಿದೆ.

ನಾಗರಾಜಪ್ಪ (56) ಎಂದು ಗುರುತಿಸಲಾಗಿದೆ, ಅವರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಶಿಸ್ತಿನ ಹಾಗೂ ನಿಷ್ಠಾವಂತ ಶಿಕ್ಷಕರಾಗಿ ಶಿಕ್ಷಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಭಾನುವಾರ ರಾತ್ರಿ ಮನೆಯ ಮುಂಭಾಗದಲ್ಲಿ ನಿಂತಿದ್ದ ವೇಳೆ ಏಕಾಏಕಿ ಗುಡುಗು-ಸಿಡಿಲು ಸಹಿತ ಮಳೆ ಆರಂಭಗೊಂಡಿದೆ. ಇದೇ ವೇಳೆ ಭಾರೀ ಸಿಡಿಲಿನ ಶಬ್ದ ಕೇಳಿಬಂದಿದ್ದು, ಅದರಿಂದ ಬೆಚ್ಚಿಬಿದ್ದ ಶಿಕ್ಷಕ ನಾಗರಾಜಪ್ಪ ಅವರು ತೀವ್ರ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ತಕ್ಷಣ ಅವರು ಕುಸಿದು ಬಿದ್ದಿದ್ದು, ಕುಟುಂಬಸ್ಥರು ನೆರವಿಗೆ ಧಾವಿಸಿದರೂ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಹಾಗೂ ಶಿಕ್ಷಣ ವಲಯದವರು ನಾಗರಾಜಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ/ ಹಳಿಯಾಳದಲ್ಲಿ ಗುಡುಗು ಸಹಿತ ಭಾರೀ ಮಳೆ : ಸಿಡಿಲು ಬಡಿದು ಮೂರು ಜಾನುವಾರು ಸಾವು ; ಶಾಲೆ ಮೇಲ್ಚಾವಣಿಗೂ ಹಾನಿ