ಸುದ್ದಿಬಿಂದು ವರದಿ
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸಿಂಪಿಗಲ್ಲಿಯಲ್ಲಿ ಎರಡು ಗುಂಪಿನ ಯುವಕರ ನಡುವೆ ಗ್ಯಾಂಗ್‌ವಾರ್ ನಡೆದ ಘಟನೆ ಬೆಳಕಿಗೆ ಬಂದಿದೆ. ಯುವಕರ ನಡುವೆ ನಡೆದ ಮಾರಾಮಾರಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿವೆ.

ನಗರದ ದೇವಿಕೆರೆ ಸಮೀಪ ನಿನ್ನೆ ರಾತ್ರಿ ನಡೆದ ಬೈಕ್ ಅಪಘಾತ ಈ ವೈಷಮ್ಯಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ಬಳಿಕ ಎರಡು ಗುಂಪಿನ ಯುವಕರ ನಡುವೆ ಮಾತಿನ ಚಕಮಕಿ ಉಂಟಾಗಿ, ನಂತರ ಅದು ತೀವ್ರ ಮನಸ್ತಾಪಕ್ಕೆ ಕಾರಣವಾಗಿತ್ತು. ಬಳಿಕ ಸಿಂಪಿಗಲ್ಲಿಯಲ್ಲಿ ಮುಖಾಮುಖಿಯಾದ ಯುವಕರು ಪರಸ್ಪರ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಸಂಬಂಧ ಶಿರಸಿ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಪ್ರಕರಣದಲ್ಲಿ ಶಿರಸಿಯ ಅಯಾನ್ ಟಿನಮೇಕರ್, ಸರ್ಪರಾಜ ಟಿನಮೇಕರ್, ಆದಿಲ್ ಸಕ್ಕರಖಾನ್, ಅಭಯ್ ಹುದಾರ್, ಸರ್ವೇಶ್ ಹಿರೇಮಠ ಹಾಗೂ ಆಕಾಶ ಕುಂದನಗಾರ ಸೇರಿ ಆರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಕುರಿತಾಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ/ ಅಂಕೋಲಾ ಮೂಲದ ವೈದ್ಯ ಬೆಳಗಾವಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ