ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ: ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಮುಳುಗಡೆಯಾಗಿದ್ದು, ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ಸಮಯಪ್ರಜ್ಞೆಯಿಂದ ರಕ್ಷಿಸಿರುವ ಘಟನೆ ನಡೆದಿದೆ.
ಅಂಕೋಲಾ ತಾಲೂಕಿನ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿದ್ದ ಮಂಜುನಾಥ್ ಕಾರ್ವಿ ಅವರ ಮಾಲಿಕತ್ವದ ‘ಶ್ರೀ ನವರತ್ನ’ ಹೆಸರಿನ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗಿದ್ದ ವೇಳೆ ಬೋಟ್ಗೆ ಹಾನಿಯಾಗಿದ್ದು, ಇದರಿಂದ ಬೋಟ್ಗೆ ನೀರು ನುಗ್ಗಿ ಮುಳುಗಡೆಯಾಗಿದೆ ಎಂದು ತಿಳಿದುಬಂದಿದೆ.
ಬೋಟ್ ಮುಳುಗುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಸಮೀಪದಲ್ಲಿದ್ದ ಸ್ಥಳೀಯ ಮೀನುಗಾರಿಕಾ ಬೋಟ್ಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಮಾಡಿದ್ದಾರೆ. ಈ ವೇಳೆ ಬೋಟ್ನಲ್ಲಿದ್ದ ಎಲ್ಲಾ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ ರಕ್ಷಣೆಗೆ ಒಳಗಾದ ಮೀನುಗಾರರಾಗಿದ್ದಾರೆ.
ಮೀನುಗಾರರ ರಕ್ಷಣೆಯಲ್ಲಿ ಇಕ್ಬಾಲ್ ಅಬ್ದುಲ್ ಗಫೂರ್ ಪ್ರಮುಖ ಪಾತ್ರ ವಹಿಸಿದ್ದು, ಅವರ ಸಮಯೋಚಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ/ಡಿಕೆಶಿ ಜತೆಗೆ 8 ಸಚಿವರ ಪ್ರಮಾಣವಚನ ಸ್ವೀಕಾರ? ಮೊದಲ ಕಂತಲ್ಲೇ ಮಂಕಾಳ್ ವೈದ್ಯ ಸಚಿವರಾಗಲಿದ್ದಾರಾ

