ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕರಾವಳಿ ಭಾಗದ ಅಭಿವೃದ್ಧಿ, ಮೀನುಗಾರರ ಹಕ್ಕುಗಳ ರಕ್ಷಣೆ ಹಾಗೂ ಜನಪರ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಹಿರಿಯ ನಾಯಕ ಮಾಂಕಾಳ ವೈದ್ಯರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮತ್ತೊಂದು ಮಹತ್ವದ ಜವಾಬ್ದಾರಿ ಸಿಗಲಿರುವುದು ಕರಾವಳಿ ಭಾಗದ ಜನರಲ್ಲಿ ಸಂತಸ ಮೂಡಿಸಿದೆ.

ವರ್ಷಗಳಿಂದ ಮೀನುಗಾರರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು, ಅವರ ಪರವಾಗಿ ಧ್ವನಿಯಾಗಿ ಕಾರ್ಯನಿರ್ವಹಿಸಿರುವ ಮಾಂಕಾಳ ವೈದ್ಯರು ಕರಾವಳಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಾ ಬಂದಿದ್ದಾರೆ. ಮೀನುಗಾರಿಕಾ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳ ಸುಧಾರಣೆ, ಮೀನುಗಾರರಿಗೆ ಸೌಲಭ್ಯಗಳ ವಿಸ್ತರಣೆ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ನಿರಂತರವಾಗಿ ಶ್ರಮಿಸಿದ್ದಾರೆ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಸಚಿವ ಸಂಪುಟದಲ್ಲಿ ಅವರಿಗೆ ಮತ್ತೊಂದು ಜವಾಬ್ದಾರಿ ನೀಡುವುದು ಪಕ್ಕಾ ಆಗುತ್ತಿದಂತೆ ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ. ಕರಾವಳಿಯ ಅಭಿವೃದ್ಧಿಯ ಕರ್ಣ ಎಂದು ಗುರುತಿಸಿಕೊಂಡಿರುವ ಮಾಂಕಾಳ ವೈದ್ಯರ ಈ ಸಾಧನೆ ಮೀನುಗಾರ ಸಮುದಾಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ನೇತೃತ್ವದಲ್ಲಿ ಇನ್ನಷ್ಟು ಜನಪರ ಯೋಜನೆಗಳು ಜಾರಿಯಾಗಲಿವೆ ಎಂಬ ನಿರೀಕ್ಷೆ ಮೂಡಿದೆ.

ಮೀನುಗಾರರ ಧ್ವನಿಯಾಗಿ, ಅಭಿವೃದ್ಧಿಯ ಶಕ್ತಿಯಾಗಿ ಗುರುತಿಸಿಕೊಂಡಿರುವ ಮಾಂಕಾಳ ವೈದ್ಯರಿಗೆ ವಿವಿಧ ಸಂಘಟನೆಗಳು, ಮುಖಂಡರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕರಾವಳಿಯ ಕನಸುಗಳಿಗೆ ಹೊಸ ಶಕ್ತಿ ತುಂಬುವ ಈ ಬೆಳವಣಿಗೆ ಪ್ರದೇಶದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ/11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ