ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : 2026ರ ನೈಋತ್ಯ ಮುಂಗಾರು ಜೂನ್ 4ರಂದು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದು, ರಾಜ್ಯದಲ್ಲಿ ಉತ್ತಮ ಮಳೆಯ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು India Meteorological Department (ಐಎಂಡಿ) ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೆ ಉತ್ತರಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಹಲವು ಭಾಗದಲ್ಲಿ ಮಳೆ ಜೋರಾಗಿದೆ.

ಐಎಂಡಿ ಪ್ರಕಟಣೆಯ ಪ್ರಕಾರ, ಮುಂದಿನ 2ರಿಂದ 3 ದಿನಗಳಲ್ಲಿ ಮುಂಗಾರು ಕರ್ನಾಟಕದ ಇನ್ನಷ್ಟು ಭಾಗಗಳಿಗೆ ವಿಸ್ತರಿಸಲು ಅನುಕೂಲಕರ ವಾತಾವರಣವಿದೆ. ಇದರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.

ಈಗಾಗಲೇ ಕೇರಳ ಮತ್ತು ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುತ್ತಿದೆ. ಮುಂಗಾರು ಚುರುಕುಗೊಳ್ಳುತ್ತಿದ್ದಂತೆ ಕೃಷಿ ಚಟುವಟಿಕೆಗಳಿಗೂ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಹವಾಮಾನ ಇಲಾಖೆ ಮುಂಗಾರು ಪ್ರಗತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಹವಾಮಾನ ಮುನ್ಸೂಚನೆಗಳನ್ನು ಪ್ರಕಟಿಸಲಿದೆ.

ಇದನ್ನೂ ಓದಿ/ಜಿಲ್ಲಾ ಆಸ್ಪತ್ರೆ ಶಿರಸಿಗೆ ಸ್ಥಳಾಂತರಕ್ಕೆ ವಿರೋಧ: ಕಾರವಾರದಲ್ಲೇ ಉಳಿಸಬೇಕು, ಇಲ್ಲದಿದ್ದರೆ ಉಗ್ರ ಹೋರಾಟ :ಮಾಧವ ನಾಯ್ಕ