ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ತಾಲೂಕಿನ ಬರ್ಗಿಯ ಹಿರಿಯ ಪ್ರಾಥಮಿಕ ಶಾಲೆ ಬರ್ಗಿ ನಂ.1ರಲ್ಲಿ ವಿಶ್ವ ಪರಿಸರ ದಿನವನ್ನು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಂಸಿ) ಸದಸ್ಯರು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ವಿದ್ಯಾರ್ಥಿಗಳಿಗೆ ಪರಿಸರದ ರಕ್ಷಣೆ, ಮರಗಳ ಮಹತ್ವ ಹಾಗೂ ಹಸಿರು ಸಂಪತ್ತಿನ ಉಳಿವಿನ ಕುರಿತು ಶಿಕ್ಷಕರು ಮಾಹಿತಿ ನೀಡಿದರು.
ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷರು ಕರೆ ನೀಡಿದರು. ವಿಶ್ವ ಪರಿಸರ ದಿನದ ಅಂಗವಾಗಿ ನಡೆದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಾಧ್ಯಾಪಕಿ ಚಂದ್ರಕಲಾ ನಾಯಕ. ಶಿಕ್ಷಕರಾದ ರಾಮನಾಥ್ ನಾಯ್ಕ, ಶೋಭಾ ನಾಯ್ಕ್, ವಿಜಯ ಲಕ್ಷ್ಮಿ ಗಾಂವ್ಕರ್ , ಮಮತಾ ನಾಯಕ. ಕಾಮಾಕ್ಷಿ ಗೌಡ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು
ಇದನ್ನೂ ಓದಿ/ಉತ್ತರ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್: ಜೂನ್ 9-10ರಂದು ಭಾರೀ ಮಳೆ ಸಾಧ್ಯತೆ

