ಸುದ್ದಿಬಿಂದು ಬ್ಯೂರೋ ವರದಿ
Siddapura /ಸಿದ್ಧಾಪುರ: ತಾಲೂಕಿನ ಹಾರ್ಸಿಕಟ್ಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುತ್ತಗಾರ ಗ್ರಾಮದ ವಿದ್ಯಾರ್ಥಿಯೊಬ್ಬ student) ಕಾನಸೂರಿನ ಇಂದಿರಾಗಾಂಧಿ ವಸತಿ ನಿಲಯದಲ್ಲಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಸಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತ ವಿದ್ಯಾರ್ಥಿಯ ಮನೆಗೆ ತೆರಳಿದ(MLA) ಶಾಸಕ ಭೀಮಣ್ಣ ನಾಯ್ಕ ಅವರು, ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದ ಹೆತ್ತವರು ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಈ ವೇಳೆ ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿ, ಕುಟುಂಬಕ್ಕೆ ಸಾಂತ್ವನದ ಮಾತುಗಳನ್ನಾಡಿದರು.

“ತುಂಬಿ ಬಾಳಬೇಕಾಗಿದ್ದ ಯುವ ಪ್ರತಿಭೆಯೊಂದು ಅಕಾಲಿಕವಾಗಿ ಇಹಲೋಕ ತ್ಯಜಿಸಿರುವುದು ಅತ್ಯಂತ ನೋವಿನ ಸಂಗತಿ.ಮಗನ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬಕ್ಕೆ ನೀಡಲಿ”ಎಂದು ಶಾಸಕ ಭೀಮಣ್ಣ ನಾಯ್ಕ ಸಂತಾಪ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿದರು. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ಕುರಿತು ಸಹ ಚರ್ಚೆ ನಡೆಸಲಾಯಿತು.

ಇದನ್ನೂ ಓದಿ/ಪೊಲೀಸರ ಎದುರೆ ರೌಡಿ ಶೀಟರ್ ರಂಪಾಟ : ರೌಡಿ ಶೀಟರ್ ವಿರುದ್ಧ FIR