ಸುದ್ದಿಬಿಂದು ಬ್ಯೂರೋ ವರದಿ
ಸಿದ್ದಾಪುರ: ಮನೆಗೆ ನುಗ್ಗಿ ಮಹಿಳೆಗೆ ಕತ್ತಿಯಿಂದ ಬೆದರಿಕೆ ಹಾಕಿ ಮಾಂಗಲ್ಯ ಸರ ದರೋಡೆ ಪ್ರಕರಣದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಿ ದರೋಡೆ ಮಾಡಲಾದ ಮಾಂಗಲ್ಯ ಸರ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಬೈಕ್ ವಶಕ್ಕೆ ಪಡೆಯುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಸಿದ್ದಾಪುರ ತಾಲೂಕಿ ಕೊಂಡಿ ಗ್ರಾಮದ
ಮಹೇಶ ಹನುಮಂತ ಮಡಿವಾಳ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಳದಕಟ್ಟಾ, ಸೊರಬ ರಸ್ತೆಯಲ್ಲಿರುವ ಪದ್ಮರಾಜ್ ವಿಲ್ಲಾ ನಿವಾಸದಲ್ಲಿ ಜೂನ್ 22, 2026ರಂದು ಮನೆಯಲ್ಲಿದ್ದ ಪೂನಮ್ ಗಣಪತಿ ಶೇಟ್ ಅವರ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ಕತ್ತಿ ಹಿಡಿದು ಬಂದು. ಮನೆಯಲ್ಲಿದ್ದ ಮಹಿಳೆಗೆ ಬೆದರಿಕೆ ಹಾಕಿ ಆಕೆಯ ಕುತ್ತಿಗೆಯಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಕಸಿದುಕೊಳ್ಳಲು ಯತ್ನಿಸಿದ್ದ ಈ ಸಮಯದಲ್ಲಿ . ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ ಮನೆಯಿಂದ ಹೊರಬರಲು ಯತ್ನಿಸಿದಾಗ ಆರೋಪಿ ತಾಳಿ ಸರವನ್ನು ಬಲವಂತವಾಗಿ ಎಳೆದಿರು ಪರಿಣಾಮ ಆಕೆಯ ಕುತ್ತಿಗೆಯಲ್ಲಿದ್ದ ಮಾಂಗಲ್ಯ, ಸರ ಬಂಗಾರದ ತಾಳಿ ಸರ ಹಾಗೂ ಆಂಟಿಕ್ ಕ್ವಾಯಿನ್ ಪವನ್ ಕೊಂಡಿ ಕಸಿದು ಪರಾರಿಯಾಗಿದ್ದ, ದರೋಡೆಗೀಡಾದ ಚಿನ್ನದ ಮೌಲ್ಯ ಸುಮಾರು 3 ಲಕ್ಷ ಎಂದು ಅಂದಾಜಿಸಲಾಗಿದೆ.
24 ಗಂಟೆಯೊಳಗೆ ಆರೋಪಿ ಬಂಧನ
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಾಯಿತು. ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜೆ.ಬಿ. ಸೀತಾರಾಮ, ಪಿಎಸ್ಐ ಶಾಂತಿನಾಥ ಕೆ. ಪಾಸಾನೆ ಹಾಗೂ ತನಿಖಾ ಪಿಎಸ್ಐ ನಾಗಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಚಿನ್ನ ಹಾಗೂ ಬೈಕ್ ವಶ
ಬಂಧಿತ ಆರೋಪಿಯಿಂದ ಸುಮಾರು 15.2 ಗ್ರಾಂ ತೂಕದ ಬಂಗಾರದ ತಾಳಿ ಸರ ಮತ್ತು ಆಂಟಿಕ್ ಕ್ವಾಯಿನ್ ಪವನ್ ಕೊಂಡಿ, ಅಂದಾಜು 2.25 ಲಕ್ಷ ಮೌಲ್ಯದ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ವೇಳೆ ಕೃತ್ಯಕ್ಕೆ ಬಳಸಿದ್ದ ಕೆಎ-31 ಇಎಫ್-2020 ಸಂಖ್ಯೆಯ ಮೋಟಾರ್ಸೈಕಲ್ನ್ನು ಸಹ ವಶಕ್ಕೆ ಪಡೆದಿದ್ದು, ಇದರ ಮೌಲ್ಯ ಸುಮಾರು 45 ಸಾವಿರ ಎಂದು ಅಂದಾಜಿಸಲಾಗಿದೆ.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಅಲಸಲಾಗಿದೆ.
ಪೊಲೀಸ್ ತಂಡಕ್ಕೆ ಎಸ್ಪಿ ಪ್ರಶಂಸೆ
ಸೂಕ್ಷ್ಮ ಹಾಗೂ ಗಂಭೀರ ಸ್ವರೂಪದ ಈ ಪ್ರಕರಣವನ್ನು 24 ಗಂಟೆಗಳಲ್ಲೇ ಭೇದಿಸಿ ಆರೋಪಿಯನ್ನು ಬಂಧಿಸಿದ ಸಿದ್ದಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ, ಶಿರಸಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಜಿಲ್ಲಾ ಪೊಲೀಸ್ ಠಾಣೆಯ ಟೆಕ್ನಿಕಲ್ ಸೆಲ್ ತಂಡದ ಕಾರ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
ಇದನ್ನೂ ಓದಿ/ಗಡಿಪಾರು ಆದೇಶ ಉಲ್ಲಂಘಿಸಿದ್ದ ರೌಡಿ ಬಂಧನ

