ಸುದ್ದಿಬಿಂದು ಬ್ಯೂರೋ ವರದಿ /ದಾಂಡೇಲಿ : ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಬೈಕ್ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕೆ.ಸಿ.ವೃತ್ತದಿಂದ ಹೋಗುತ್ತಿದ್ದ ಒಂದು ದ್ವಿಚಕ್ರ ವಾಹನ ಮತ್ತು ಹಳಿಯಾಳ ರಸ್ತೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ 3ನಂ ಗೇಟ್ ಹತ್ತಿರ ಮುಖಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 14ನೇ ಬ್ಲಾಕ್ ನಿವಾಸಿ ಎಬೆಲ್ ನಾಗಯ್ಯ ಮಾದರ ಮತ್ತು ಗಾಂಧಿನಗರದ ನಿವಾಸಿ ವಸೀಪ್ ರಜಾ ಸಲೀಂ ಮುಲ್ಲಾ ಇವರನ್ನು ಧಾರವಾಡಕ್ಕೆ ರವಾನಿಸಲಾಗಿದೆ. ಗಾಯಗೊಂಡ ಇನ್ನೋರ್ವ ಮಾರುತಿ ನಗರದ ನಿವಾಸಿ ಜುನೇದ ಬಾಷಾ ಸುಲೇಮಾನ ಇಟಗಿ ಈತನಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಧಾರವಾಡಕ್ಕೆ ಕಳುಹಿಸಿಕೊಡುವ ಸಾಧ್ಯತೆ ಇದೆ.
ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಇದನ್ಮೂ ಓದಿ/ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧದ ಶಂಕೆ: ಅಣ್ಣನಿಂದಲ್ಲೇ ತಮ್ಮನ ಕೊಲೆ



