ಸುದ್ದಿಬಿಂದು ಬ್ಯೂರೋ‌ ವರದಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಕುಮಟಾ ತಾಲೂಕಿನ ಮೂರೂರು ಗ್ರಾಮದಲ್ಲಿ ಗುಡ್ಡ ಕುಸಿತ ಸಂಭವಿಸಿ ಮನೆಯೊಂದಕ್ಕೆ ಹಾನಿಯಾಗಿದೆ.

ಮೂರೂರು ಗ್ರಾಮದ ನಿವಾಸಿ ರಾಮಚಂದ್ರ ಪಿ. ಭಟ್ ಅವರ ಮನೆಯ ಸಮೀಪದ ಗುಡ್ಡ ಕುಸಿದ ಪರಿಣಾಮ ಬೃಹತ್ ಬಂಡೆಕಲ್ಲೊಂದು ಮನೆಗೆ ಅಪ್ಪಳಿಸಿದೆ. ಇದರಿಂದ ಮನೆಯ ಒಂದು ಭಾಗದ ಗೋಡೆಗೆ ಹಾನಿಯಾಗಿದೆ., ಇದರಿಂದಾಗಿ ಮನೆಯವರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಅದೃಷ್ಟವಶಾತ್ ಘಟನೆ ವೇಳೆ ಮನೆಯಲ್ಲಿದ್ದ ಜನರಿಗೆ ಯಾವುದೇ ರೀತಿಯ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ. ಘಟನೆಯಿಂದ ಐವತ್ತು ಸಾವಿರಕ್ಕೂ ಅಧಿಕ‌ ಹಾನಿ ಉಂಟಾಗಿದೆ‌ ಎನ್ನಲಾಗಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳ ಸಮೀಪ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ/ಉತ್ತರಕನ್ನಡ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ : ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ