ಕಾರವಾರ : ಘಾಡಸಾಯಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳಗೇಜೂಗ ಗ್ರಾಮದ ಬೂತ್ ಪ್ರಮುಖರಾದ ಸಂತೋಷ ಗೋವೆಕರ ಅವರ ನಿವಾಸಕ್ಕೆ ಹಾಗೂ ಹಳಗಾದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಸುಧಾ ನಾಯ್ಕ ಅವರ ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ಶ್ರೀಮತಿ ರೂಪಾಲಿ ಸಂತೋಷ ನಾಯ್ಕ ಅವರು ಸೌಹಾರ್ದಯುತ ಭೇಟಿ ನೀಡಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು.
ಇದೇ ಸಂದರ್ಭದಲ್ಲಿ ಮಲ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೈಗಾವಾಡ ಗ್ರಾಮದ ಮಲ್ಲಾಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಗಾಂವಕರ ಅವರ ನಿವಾಸಕ್ಕೂ ಹಾಗೂ ಬಿಜೆಪಿ ಮುಖಂಡ ಕೃಷ್ಣಾ ನಾಯ್ಕ ಅವರ ನಿವಾಸಕ್ಕೂ ಭೇಟಿ ನೀಡಿ ಪಕ್ಷದ ಸಂಘಟನೆ, ಸ್ಥಳೀಯ ಬೆಳವಣಿಗೆಗಳು ಹಾಗೂ ಸಾರ್ವಜನಿಕ ವಿಚಾರಗಳ ಕುರಿತು ಆತ್ಮೀಯವಾಗಿ ಮಾತುಕತೆ ನಡೆಸಿದರು.
ಈ ಭೇಟಿಯ ವೇಳೆ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ್ ಗುನಗಿ, ಪ್ರಮುಖರಾದ ಗಿರೀಶ್ ಕೋಠಾರಕರ, ಮಂಗೇಶ್ ಗೋವೆಕರ, ಸಂತೋಷ ಗೋವೆಕರ, ರಾಜೇಶ್ ಗಾಂವಕರ, ಕೃಷ್ಣಾ ನಾಯ್ಕ, ಸುಧಾ ನಾಯ್ಕ, ಚಂದಾ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ/ ಕ್ವಾರಿಯಲ್ಲಿ ಕಲ್ಲು ಬಂಡೆ ಕುಸಿತ: 7 ಕಾರ್ಮಿಕರ ದುರ್ಮರಣ

