ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ತಾಲೂಕಿನ ಆರತಿಬೈಲ್ ಸಮೀಪದ ಬಳಗಾರ ಕ್ರಾಸ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗೆ ಯಲ್ಲಾಪುರ ಶಾಸಕ ಭೀಮಣ್ಣ ಟಿ. ನಾಯ್ಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

“ಆರತಿಬೈಲ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಅಸುನೀಗಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಇದು ಅತ್ಯಂತ ದುರದೃಷ್ಟಕರ ಹಾಗೂ ಹೃದಯವಿದ್ರಾವಕ ಘಟನೆ. ಅಮಾಯಕ ಜೀವಗಳು ಕಳೆದುಹೋಗಿರುವುದು ನೋವುಂಟು ಮಾಡಿದೆ,” ಎಂದು ತಿಳಿಸಿದ್ದಾರೆ.

ಮೃತರ ಆತ್ಮಗಳಿಗೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಮೃತ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶಾಸಕ ಭೀಮಣ್ಣ ನಾಯ್ಕ, ಮೃತರ ಕುಟುಂಬಗಳ ದುಃಖದಲ್ಲಿ ತಾವು ಭಾಗಿಯಾಗಿರುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ/ಪೊಲೀಸರ ವಿರುದ್ಧ ಯುವತಿಯಿಂದ ಲೈಂಗಿಕ ದೌರ್ಜನ್ಯ ಆರೋಪ; ಮಹಿಳಾ ಠಾಣೆಯಲ್ಲಿ ಪ್ರಕರಣ