ಸುದ್ದಿಬಿಂದು ಬ್ಯೂರೋ ವರದಿ
ರಾಮನಗುಳಿ : ಅಂಕೋಲಾ ತಾಲೂಕಿನ ಕನಕನಹಳ್ಳಿ ಸಮೀಪದ ನರಸಿಂಹ ಭಾಗವತ ಅವರ ಮಾಲೀಕತ್ವದ ಅನ್ನಪೂರ್ಣ ಮಾರ್ಟ್‌ನಲ್ಲಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಅಂಗಡಿಗೆ ನುಗ್ಗಿ ಕಳ್ಳತನ ನಡೆಸಿದ ಬಳಿಕ, ಅಂಗಡಿ ಮಾಲೀಕರಿಗೆ ಅಪಾಯ ಉಂಟಾಗುವ ರೀತಿಯಲ್ಲಿ ಬಾಗಿಲಿಗೆ ವಿದ್ಯುತ್ ಸಂಪರ್ಕವನ್ನು ಹಾಕಿರುವುದು ದೃಶ್ಯಾವಳಿಯಲ್ಲಿ ಕಂಡುಬರುತ್ತಿದೆ.. ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ., ಇದೇ ಅಂಗಡಿಯಲ್ಲಿ ಈ ಹಿಂದೆ ಸಹ ಹಲವು ಬಾರಿ ಕಳ್ಳತನ ನಡೆದಿದೆ., ಪ್ರತಿಯೊಂದು ಪ್ರಕರಣದಲ್ಲೂ ನಾರಾಯಣ ಸಿದ್ದಿಯ ಹೆಸರು ಕೇಳಿಬಂದಿದೆ. ಅಲ್ಲದೆ ಹೆಗ್ಗಾರ, ಕಲ್ಲೇಶ್ವರ ಸೇರಿದಂತೆ ಸುತ್ತಮುತ್ತಲಿನ ಕೆಲವು ಸಹಕಾರಿ ಸಂಘಗಳಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿಯೂ ಆತನ ಹೆಸರು ಪ್ರಸ್ತಾಪವಾಗುತ್ತಲೆ ಇದೆ ಎನ್ನಲಾಗಿದೆ.

ಹಿಂದಿನ ಕೆಲವು ಪ್ರಕರಣಗಳಲ್ಲಿ ನಾರಾಯಣ ಸಿದ್ದಿಯ ಸಹಚರರೆಂದು ಶಂಕಿಸಲಾದ ಕೆಲವರನ್ನು ಪೊಲೀಸರು ಬಂಧಿಸಿದ್ದರೂ, ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ನಾರಾಯಣ ಸಿದ್ದಿಯನ್ನು ಇನ್ನೂ ಬಂಧಿಸಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಕೇವಲ ಕಳ್ಳತನ ಮಾತ್ರವಲ್ಲದೆ ಅಂಗಡಿ ಮಾಲೀಕರ ಜೀವಕ್ಕೂ ಅಪಾಯ ಉಂಟುಮಾಡುವ ಪ್ರಯತ್ನ ನಡೆದಿದೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.