ಸುದ್ದಿಬಿಂದು ಬ್ಯೂರೋ ವರದಿ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಬಸ್‌ ಗಾಗಿ ಕಾಯುತ್ತಿದ್ದ ಯುವತಿ‌ ಓರ್ವಳ ಮೇಲೆ ಯುವಕನೋರ್ವ ತಲವಾರ ಬಿಸಿ ಬರ್ಬರವಾಗಿ ಹ*ತ್ಯೆಮಾಡಿರುವ ಘಟನೆ ನಡೆದಿದೆ. ಕರಾವಳಿ ಜಿಲ್ಲೆಯನ್ನೆ ಬೆಚ್ಚಿಬೀಲಿಸುವಂತೆ ಮಾಡಿದೆ.

ಘಟನೆಯಲ್ಲಿ ಕಕ್ಯಪದವು ಸಮೀಪದ ಕೊಡಂಗೆ ಗ್ರಾಮದ ನಿವಾಸಿ ಲಾವಣ್ಯ (25) ಎಂದು ಗುರುತಿಸಲಾಗಿದೆ. ಕಲ್ಲಡ್ಕದ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಚೇತನ್ ಎಂಬಾತ ಯುವತಿಯನ್ನು   ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಈ ವಿಚಾರ ಯುವತಿಗೆ ತಿಳಿದಿರಲ್ಲಿವಂತೆ, ಈ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮತ್ತು ಮೃತ ಯುವತಿ ದೂರದ ಸಂಬಂಧಿಕರಾಗಿದ್ದರು ಎನ್ನಲಾಗಿದೆ.

ಲಾವಣ್ಯ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದಿದ್ದಳಂತೆ. ಕಕ್ಯಪದವಿಗೆ ತೆರಳುವ ಬಸ್‌ನಲ್ಲಿ ಕುಳಿತಿದ್ದ ವೇಳೆ, ಅಲ್ಲಿಗೆ ಬಂದ ಆರೋಪಿ ತಲವಾರನಿಂದ ದಾಳಿ ನಡೆಸಿದ್ದಾನೆ. ದಾಳಿಯಿಂದ ತಪ್ಪಿಸಿಕೊಳ್ಳಲು ಯುವತಿ ಬಸ್‌ನಿಂದ ಇಳಿದು ಓಡಲು ಯತ್ನಿಸಿದರೂ, ಬೆನ್ನಟ್ಟಿದ ಆರೋಪಿ ಕುತ್ತಿಗೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ತೀವ್ರವಾಗಿ ಗಾಯಗೊಂಡ ಲಾವಣ್ಯ ಅವರನ್ನು ಸ್ಥಳದಲ್ಲಿದ್ದವರು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಕೃತ್ಯ ಎಸಗಿದ ಬಳಿಕ ಆರೋಪಿ ಆಯುಧವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ವಿಶೇಷ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ/ಅರಣ್ಯ ಇಲಾಖೆಯಲ್ಲಿ ಮೇಜರ್ ಸರ್ಜರಿ! ಉತ್ತರ ಕನ್ನಡ ಜಿಲ್ಲೆಯ 19 RFOಗಳ ವರ್ಗಾವಣೆ.!