ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಲಿದೆ, ಕುಮಟಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಬೆಂಗಳೂರು ಸಂಸ್ಥೆಯ ಸಿಎಸ್ಆರ್ (CSR) ನಿಧಿಯ ಸಹಾಯದೊಂದಿಗೆ ನಿರ್ಮಾಣಗೊಂಡಿರುವ ನೂತನ ಟ್ರಾಮಾ ಕೇರ್ ಸೆಂಟರ್ ನ್ನ ಜುಲೈ 21ರಂದು ಬೆಳಿಗ್ಗೆ ೧೦ಗಂಟೆಗೆ ಆರೋಗ್ಯ ಸಚಿವ ಯು ಟಿ ಖಾದರ್ ಲೋಕಾರ್ಪಣೆ ಮಾಡಲಿದ್ದಾರೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಇದರ ನಿದೇಶಕರಾಗಿರುವ ರಜನೀಶ್ ಶರ್ಮಾ ಅವರು ತುರ್ತು ಚಿಕಿತ್ಸಾವಿಭಾಗ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಆಡಳಿತ ಅಧಿಕಾರಿ ಸುಷಮಾ ಗೋದ್ಬೋಲೆ, ಜಾನಕಿ ಕೆ.ಎಂ. ಸೇರಿದಂತೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕುಮಟಾ–ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದಾರೆ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ್, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಭಟ್ಕಳ ಶಾಸಕ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್ ಸೈಲ್, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್,
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರೀಯಾ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಜಿ ಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ದಿಲೀಶ್ ಶಶಿ, ಕುಮಟಾ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಗಣೇಶ ಟಿ ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಜಯ್ ದೊಡ್ಡಮನಿ, ಕುಮಟಾ ಸಹಾಯಕ ಆಯುಕ್ತರಾಗಿರುವ ಪಿ. ಶ್ರವಣ್ ಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಹಿರಿಯ ಆಡಳಿತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

