ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಯು.ಟಿ.ಖಾದರ ಅವರು ನಾಳೆ ಕುಮಟಾಕ್ಕೆ ಆಗಮಿಸಲಿದ್ದು ನೂತನಾಗಿ ನಿರ್ಮಾಣವಾಗಿರುವ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆ ಮಾಡಲಿದ್ದಾರೆ.
ಮಂಗಳೂರಿನಿಂದ ರಸ್ತೆ ಮಾರ್ಗ ಮೂಲಕ ಕುಮಟಾಕ್ಕೆ ಆಗಮಿಸಲಿರುವ ಯು.ಟಿ.ಖಾದರ ಅವರು ೧೧-೩೦ಕ್ಕೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಟ್ರಾಮಾ ಕೇರ್ ಸೆಂಟರ್ ಉದ್ಘಾಟಿಸಲಿದ್ದಾರೆ.
ಈ ಮೂಲಕ ಉತ್ತರ ಕನ್ನಡ ಜಿಲ್ಲೆಯ ಸಾರ್ವಜನಿಕ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಲಿದೆ, ಕುಮಟಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಬೆಂಗಳೂರು ಸಂಸ್ಥೆಯ ಸಿಎಸ್ಆರ್ (CSR) ನಿಧಿಯ ಸಹಾಯದೊಂದಿಗೆ ಈ ಟ್ರಾಮಾ ಕೇರ್ ಸೆಂಟರ್ ನಿರ್ಮಾಣಗೊಂಡಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಬೆಂಗಳೂರು ಇದರ ನಿದೇಶಕರಾಗಿರುವ ರಜನೀಶ್ ಶರ್ಮಾ ಅವರು ತುರ್ತು ಚಿಕಿತ್ಸಾವಿಭಾಗ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಆಡಳಿತ ಅಧಿಕಾರಿ ಸುಷಮಾ ಗೋದ್ಬೋಲೆ, ಜಾನಕಿ ಕೆ.ಎಂ. ಸೇರಿದಂತೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕುಮಟಾ–ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದು,ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ್, ಶಿರಸಿ ಶಾಸಕ ಭೀಮಣ್ಣ ನಾಯ್ಕ್, ಭಟ್ಕಳ ಶಾಸಕ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್ ಸೈಲ್, ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್,
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರೀಯಾ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಜಿ ಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ದಿಲೀಶ್ ಶಶಿ, ಕುಮಟಾ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಗಣೇಶ ಟಿ ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಜಯ್ ದೊಡ್ಡಮನಿ, ಕುಮಟಾ ಸಹಾಯಕ ಆಯುಕ್ತರಾಗಿರುವ ಪಿ. ಶ್ರವಣ್ ಕುಮಾರ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಹಿರಿಯ ಆಡಳಿತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ/ಉತ್ತರ ಕನ್ನಡದ ಆರೋಗ್ಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಕುಮಟಾದಲ್ಲಿ ಮೊದಲ ಟ್ರಾಮಾ ಕೇರ್ ಸೆಂಟರ್



