ಸುದ್ದಿಬಿಂದು ಬ್ಯೂರೋ ವರದಿ
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ. ಇದೇ ವಿಚಾರವಾಗಿ ಮಾತ್ನಾಡೋದಕ್ಕೆ ದೆಹಲಿಗೆ ಬಂದಿದ್ದೇವೆ. ಆದರೆ ಇಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ಹೈಕಮಾಂಡ ಜೊತೆ ಮಾತನಾಡೋದಕ್ಕೆ ಸಾಧ್ಯವಾಗಿಲ್ಲ. ಕರೆಗಾಗಿ ಕಾಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ” ಸಿದ್ದರಾಮಯ್ಯ ಅವರ ಜೊತೆ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಬಂದಿದ್ದೇವೆ. ಹೈಕಮಾಂಡ್ ಸಮಯ ನೀಡಿದರೆ ಮಾತುಕತೆಗೆ ನಾವು ಸಿದ್ಧರಿದ್ದೇವೆ” ಎಂದು ತಿಳಿಸಿದ್ದಾರೆ. “ಇಂದು ರಾತ್ರಿ ಸಭೆ ನಿಗದಿಯಾಗಿತ್ತು. ಆದರೆ ಹೈಕಮಾಂಡ್ ಯಾವಾಗ ಕರೆಯುತ್ತದೆ ಎಂಬುದನ್ನು ಕಾದು ನೋಡಬೇಕು” ಎಂದು ಸಿಎಂ ಹೇಳಿದ್ದಾರೆ.
ಇದೇ ವೇಳೆ ದೆಹಲಿಯಲ್ಲಿ ನಡೆದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರಧಾನಿ ಅವರ ಎದುರು ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ನಾವು ಕೂಡ ಅದರಲ್ಲಿ ಭಾಗವಹಿಸಿದ್ದೇ. ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, “ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇನ್ನೂ ಬಿಡುಗಡೆ ಮಾಡಿಲ್ಲ” ಎಂದು ಮಾಹಿತಿ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಹೈಕಮಾಂಡ್ ಸಭೆಯ ಬಳಿಕ ಸ್ಪಷ್ಟ ಚಿತ್ರಣ ಹೊರಬರುವ ನಿರೀಕ್ಷೆಯಿದೆ.

