ಸುದ್ದಿಬಿಂದು ಬ್ಯೂರೋ ವರದಿ
ಜೋಯಿಡಾ : ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲಾ ಅಂಗನವಾಡಿ-ಶಾಲೆಗಳಿಗೆ ತಹಶೀಲ್ದಾರ ಅವರು ರಜೆ ಘೋಷಣೆ ಮಾಡಿದ್ದಾರೆ.
ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವ ಕುರಿತು ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿರುವುದು, ಮರಗಳು ಉರುಳುವ ಅಪಾಯ ಹಾಗೂ ಸಂಚಾರ ಅಡಚಣೆ ಉಂಟಾಗುವ ಸಾಧ್ಯತೆ ಇರುವುದರಿಂದ ರಜೆ ಘೋಷಿಸಲಾಗಿದೆ.

