ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ನೀಟ್ ಅಕ್ರಮದ ವಿರುದ್ದ ನವದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗುತ್ತಿದ್ದಂತೆ ಮತ್ತೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು, ಬಹುತೇಕ ಬುಧವಾರ ಇಲ್ಲವೇ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ ಎನ್ನಲಾಗಿದೆ.
ಸಚಿವರ ಸಂಪುಟ ವಿಸ್ತರಣೆಗೆ ಸಂಬಂಧಿಸಿ ಕಾಂಗ್ರೇಸ್ ಹೈಕಮಾಂಡ ದೆಹಲಿಗೆ ಬರುವಂತೆ ಸಿಎಂ ಡಿ ಕೆ ಶಿವಕುಮಾರ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ. ಸಿಎಂ ಡಿಕೆ ಶಿವಕುಮಾರ ಸೇರಿದಂತೆ ಈ ಮೂವರು ನಾಯಕರು ನಾಳೆ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ನಾಳೆ ಸಂಜೆ ರಾಜ್ಯ ನಾಯಕರು ಹಾಗೂ ಕೇಂದ್ರ ನಾಯಕರೊಂದಿಗೆ ದೆಹಲಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಚರ್ಚೆ ನಡೆಸಲಿದ್ದಾರೆ. ಈಗಾಲೇ ಸಚಿವರ ಪಟ್ಟಿ ಅಂತಿಮವಾಗಿದೆ ಎನ್ನಲಾಗಿದ್ದು. ಪ್ರಮಾಣವನಕ್ಕೆ ಮೂಹೂರ್ತ ಘೋಷಣೆ ಮಾತ್ರ ಬಾಕಿ ಇದೆ ಎನ್ನಲಾಗಿದ್ದು, ಅದು ನಾಳೆ ಸಂಜೆ ಹೊತ್ತಿಗೆ ಘೋಷಣೆ ಆಗಲಿದೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಇವರೆಲ್ಲಾ ಸೇರಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಬಹುತೇಕ ಇದೇ ಬುಧವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು ಒಂದೊಮ್ಮೆ ಬುಧವಾರ ತಪ್ಪಿದ್ದಲ್ಲಿ ಅದು ಗುರುವಾರ ಆಗುವ ಎಲ್ಲಾ ಸಾಧ್ಯತೆಗಳು ಇದೆ.

