ಸುದ್ದಿಬಿಂದು ಬ್ಯೂರೋ ವರದಿ

ಅಂಕೋಲಾ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಮೂವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಬಾಳೆಗುಳಿ ಬಳಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ ಸುಮಾರು 1 ಕೆಜಿ 700 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದೆ.

ಹುಬ್ಬಳ್ಳಿಯಿಂದ ಭಟ್ಕಳದತ್ತ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅಂಕೋಲಾ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ ಅಂಕೋಲಾ ತಾಲೂಕಿನ ಬಾಳೆಗುಳಿ ಸಮೀಪ  ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಇಬ್ಬರನ್ನು ಯಲ್ಲಾಪುರದಲ್ಲಿ ಬಂಧಿಸಲಾಗಿದೆ.

ಬಂಧಿತರಲ್ಲಿ ಮಹ್ಮದ್ ಅಬ್ಬಿದ್ ಸೇರಿದಂತೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹ್ಮದ್‌ ಎಂಬಾತನ್ನ ವಶಕ್ಕೆ ಪಡೆದಿದ್ದ ವೇಳೆ ಇನ್ನೂ ಇಬ್ಬರೂ ಇರುವ ಬಗ್ಗೆ ಈತ ಪೊಲೀಸ ತನಿಖೆ ವೇಳೆಯಲ್ಲಿ ಬಾಯ್‌ ಬಿಟ್ಟಿದ್ದಾನೆ. ಬಳಿಕ ಇನ್ನಿಬ್ಬರು ಆರೋಪಿಗಳನ್ನ ಯಲ್ಲಾಪುರದಲ್ಲಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

ಕಾರ್ಯಚರಣೆಯಲ್ಲಿ ಅಂಕೋಲಾ ಸಿಪಿಐ ಚಂದ್ರಶೇಖರ್ ಮಠಪತಿ, ಪಿಎಸ್ಐಗಳಾದ ವಿಶ್ವನಾಥ ಹಾಗೂ ಗುರುನಾಥ ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಿರೀಶ, ಲಮಾಣಿ, ಮಾದೇಶ ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ/ ಭಾರೀ ಮಳೆ ಹಿನ್ನಲೆ : ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ದ,ಕ ಜಿಲ್ಲಾಧಿಕಾರಿ ಘೋಷಣೆ