ಸುದ್ದಿಬಿಂದು ಬ್ಯೂರೋ ವರದಿ
ಗೋಕರ್ಣ: ಗೋಕರ್ಣ ಪೊಲೀಸ್ ಠಾಣೆಯ ವತಿಯಿಂದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳ ಸಭೆಯನ್ನು ಆಯೋಜಿಸಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ವಹಿಸಬೇಕಾದ ಜವಾಬ್ದಾರಿ ಹಾಗೂ ಕಾನೂನು ನಿಯಮಗಳ ಕುರಿತು ಸಿಪಿಐ ಶ್ರೀಧರ ಅವರು ಅರಿವು ಮೂಡಿಸಿದರು.

ಸಭೆಯಲ್ಲಿ ಮಾತನಾಡಿದ ಸಿಪಿಐ ಶ್ರೀಧರ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾಹಿತಿ, ವಿಡಿಯೋ ಅಥವಾ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆ ಪರಿಶೀಲಿಸುವುದು ಅಗತ್ಯ. ಸಮಾಜದ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಡಿಜಿಟಲ್ ವೇದಿಕೆಗಳನ್ನು ಬಳಸುವಂತೆ ಸಲಹೆ ನೀಡಿದರು.

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ತಮ್ಮ ಪ್ರಭಾವವನ್ನು ಸಮಾಜದ ಒಳಿತಿಗಾಗಿ ಬಳಸಿಕೊಂಡು, ಸಾರ್ವಜನಿಕರಲ್ಲಿ ಉತ್ತಮ ಸಂದೇಶಗಳನ್ನು ಹರಡುವ ಮೂಲಕ ಜವಾಬ್ದಾರಿಯುತ ಡಿಜಿಟಲ್ ನಾಗರಿಕರಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಭಾಗವಹಿಸಿದ್ದ ಇನ್‌ಫ್ಲುಯೆನ್ಸರ್‌ಗಳಿಗೆ ಜವಾಬ್ದಾರಿಯುತ ಡಿಜಿಟಲ್ ನಾಗರಿಕರಾಗಿ ಸಮಾಜದ ಹಿತಕ್ಕಾಗಿ ಸಹಕರಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸಭೆಯ ಮೂಲಕ ಸಾಮಾಜಿಕ ಜಾಲತಾಣಗಳ ಸದುಪಯೋಗ, ಕಾನೂನು ಪಾಲನೆ ಹಾಗೂ ಜವಾಬ್ದಾರಿಯುತ ಆನ್‌ಲೈನ್ ವರ್ತನೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.

ಇದನ್ನೂ ಓದಿ/ ಭಾರೀ ಮಳೆ ಮುನ್ಸೂಚನೆ : ಇಂದು ಶಾಲಾ-ಕಾಲೇಜುಗಳಿಗೆ ರಜೆ .ದ.ಕ ಜಿಲ್ಲಾಧಿಕಾರಿ ಆದೇಶ