ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯಭರಿತ ಪೋಸ್ಟರ್‌ವೊಂದು ವೈರಲ್ ಆಗುತ್ತಿದೆ.

‘ಕರ್ನಾಟಕದಲ್ಲಿ ಭ್ರಷ್ಟರಿಗೆ ಬಹುಮಾನ’ ಎಂಬ ಶೀರ್ಷಿಕೆಯೊಂದಿಗೆ ಜೆಡಿಎಸ್ ಫಾರ್ ಕರ್ನಾಟಕದ ಅಧಿಕೃತ ಫೇಸ್‌ಬುಕ್‌ ಪುಟದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ. ಪೋಸ್ಟರ್‌ನಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಮೂವರು ಸಚಿವರ ಚಿತ್ರಗಳನ್ನು ಬಳಸಿಕೊಂಡು, ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವ್ಯಂಗ್ಯವಾಗಿ ಚಿತ್ರಿಸಲಾಗಿದೆ.ಜೆಡಿಎಸ್, ವಿವಿಧ ಆರೋಪಗಳನ್ನು ಉಲ್ಲೇಖಿಸಿ, ಇಂತಹ ವ್ಯಕ್ತಿಗಳಿಗೆ ಸಚಿವ ಸ್ಥಾನ ನೀಡಿರುವುದು ಕಾಂಗ್ರೆಸ್ ಸರ್ಕಾರದ ಆದ್ಯತೆಯನ್ನು ತೋರಿಸುತ್ತದೆ ಎಂದು ಪೋಸ್ಟರ್‌ನಲ್ಲಿ ಟೀಕಿಸಿದೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಪರ-ವಿರೋಧದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಡುವೆ ರಾಜಕೀಯ ವಾಕ್ಸಮರ ತೀವ್ರಗೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಚಿವರ ಆಯ್ಕೆ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಇದನ್ನೂ ಓದಿ /”ಮಂಕಾಳು ವೈದ್ಯರಿಗೆ ಅನ್ಯಾಯ; ಹಿಂದುಳಿದ ವರ್ಗ ವಿರೋಧಿ ಕಾಂಗ್ರೆಸ್: ಅನಂತಮೂರ್ತಿ ಹೆಗಡೆ”