ಸುದ್ದಿಬಿಂದು ಬ್ಯೂರೋ ವರದಿ
ಕಾಂಗ್ರೆಸ್‌ ಮುಖಂಡ, ಮುದೆರಂಗಡಿ ಗ್ರಾಮ ಪಂ ಪಂಚಾಯತ್‌ನ ಮಾಜಿ ಅಧ್ಯಕ್ಷ, ಉದ್ಯಮಿ ಓರ್ವನನ್ನ ಹಾಡು ಹಗಲಿನಲ್ಲಿ ಫೈರಿಂಗ್ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ನಡೆದಿದೆ.

ಪ್ರಿನ್ಸ್ ಪಾಯಿಂಟ್ ಡೇವಿಡ್’ ಡ್ಲಿಸೋಜಾ (55 ವರ್ಷ) ಎಂಬವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಡೇವಿಡ್ ಡಿಸೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಅವರ ಕಚೇರಿಯ ಬಳಿ ಮೆಧಾಹ್ನ 3 ಗಂಟೆ ಸುಮಾರಿಗೆ ಶೂಟೌಟ್ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅತಿ ಹತ್ತಿರದಿಂದ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಒಂದು ಗುಂಡು ಹಣೆಗೆ ತಗುಲಿದ್ದರೆ, ಎರಡು ಗುಂಡುಗಳು ಕೈಗೆ ತಗುಲಿದೆ. ತೀವ್ರ ಗಾಯಗೊಂಡಿದ್ದ ಡೇವಿಡ್ ಡಿ ಸೋಜ ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತದೇಹವನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಂದು ಬಳಿಕ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಪಡುಬಿದ್ರೆ ಮತ್ತು ಶಿರ್ವ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ/ಉತ್ತರಕನ್ನಡಕ್ಕೆ ಸಚಿವ ಸ್ಥಾನ ಸಿಗದಿರುವುದು ಬೇಸರದ ಸಂಗತಿ: ಪ್ರಸಾದ ಗಾಂವಕರ್