ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ, ಉತ್ತರಕನ್ನಡ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಳಕಿನ ಕೊರತೆಯಿಂದಾಗಿ ಸಚಿವ ಲಕ್ಷ್ಮಣ ಸವದಿ ಅವರು ಭಾಷಣ ಓದಲು ತಡವಡಿಸಿದ ಘಟನೆ ನಡೆದಿದೆ.
ಧ್ವಜಾರೋಹಣ ನೆರವೇರಿಸಿ ಬಳಿಕ ಸಚಿವ ಸವದಿ ಅವರು ಭಾಷಣ ಮಾಡುತ್ತಿದ್ದ ವೇಳೆ, ಡಯಾಸ್ನಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಭಾಷಣದ ಪ್ರತಿ ಓದಲು ಸಮಸ್ಯೆ ಎದುರಾಯಿತು. ಕತ್ತಲಿನಿಂದಾಗಿ ಕೆಲಕಾಲ ಸಚಿವರು ಭಾಷಣ ಓದಲು ಪರದಾಡಿದರು.
ಈ ವೇಳೆ ಮೊಬೈಲ್ ಟಾರ್ಚ್ ಬೆಳಕಿನ ನೆರವು ನೀಡಿದ್ದು, ಸಚಿವ ಸವದಿ ಅವರು ಮೊಬೈಲ್ ಟಾರ್ಚ್ ಹಿಡಿದುಕೊಂಡೇ ಭಾಷಣದ ಪ್ರತಿಯನ್ನು ಓದಿದರು. ಬೆಳಕಿನ ವ್ಯವಸ್ಥೆ ಸಮರ್ಪಕವಾಗಿಲ್ಲದಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಸಿಬ್ಬಂದಿ ತಕ್ಷಣ ಡಯಾಸ್ ಅನ್ನು ಬೆಳಕು ಸರಿಯಾಗಿ ಬೀಳುವ ಜಾಗಕ್ಕೆ ಸ್ಥಳಾಂತರಿಸಿದರು. ಬೆಳಕಿನ ವ್ಯವಸ್ಥೆ ಸರಿಪಡಿಸಿದ ಬಳಿಕ ಸಚಿವ ಲಕ್ಷ್ಮಣ ಸವದಿ ಅವರು ತಮ್ಮ ಭಾಷಣವನ್ನು ಮುಂದುವರಿಸಿದರು. ಸ್ವಾತಂತ್ರ್ಯೋತ್ಸವದಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಬೆಳಕಿನ ಸಮಸ್ಯೆ ಎದುರಾಗಿದ್ದು, ಎಲ್ಲರ ಅಸಮಧಾನಕ್ಕೆ ಕಾರಣವಾಯಿತು.

