ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ‘ಶ್ರೀದೇವಿ’ ಹೆಸರಿನ ಮೀನುಗಾರಿಕಾ ಬೋಟ್ ಮುಳುಗಿದ ಘಟನೆ ನಡೆದಿದೆ.
ಮೋಹನ್ ಕಿಮಾನಿ ಅವರ ಮಾಲಿಕತ್ವದ ಬೋಟ್ನಲ್ಲಿ ನಾಲ್ವರು ಮೀನುಗಾರರು ಇದ್ದರು. ಬೋಟ್ ಮುಳುಗುತ್ತಿದ್ದುದನ್ನು ಗಮನಿಸಿದ ಇತರ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ, ಬೋಟ್ನಲ್ಲಿದ್ದ ನಾಲ್ವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ತದಡಿ ಬಂದರಿನ ಅಳಿವೆಯಲ್ಲಿ ಹೂಳು ತುಂಬಿಕೊಂಡಿರುವುದರಿಂದ ಬೋಟ್ಗಳು ಪದೇಪದೇ ಮುಳುಗುವ ಘಟನೆಗಳು ನಡೆಯುತ್ತಿವೆ ಎಂದು ಮೀನುಗಾರರು ತಿಳಿಸಿದ್ದಾರೆ. ಬಂದರಿನಲ್ಲಿ ಹೂಳು ತೆರವುಗೊಳಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ.
ಬೋಟ್ ಮುಳುಗಡೆಯಿಂದ ಸುಮಾರು 15ಲಕ್ಷ ಕ್ಕೂ ಹೆಚ್ಚು ಹಾನಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ಬಂದರಿನ ಅಳಿವೆಯಲ್ಲಿನ ಹೂಳು ತೆಗೆದು, ಮೀನುಗಾರಿಕಾ ಬೋಟ್ಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮೀನುಗಾರರು ಒತ್ತಾಯಿಸಿದ್ದಾರೆ.

