ಸುದ್ದಿಬಿಂದು ಬ್ಯೂರೋ ವರದಿ
ಶಿರಸಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಸ್ಟ್ 8ರಂದು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿದ ಸ್ಥಳದಲ್ಲಿ ‘ಶುದ್ಧೀಕರಣ’ ಮಾಡಿರು ಘಟನೆ ಬೆನ್ನಲ್ಲೇ, ಈ ಹಿಂದೆ ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಬಳಿಕ ಬಿಜೆಪಿ ಕಚೇರಿಯನ್ನು ಗೋಮೂತ್ರ ಹಾಗೂ ಗಂಜಲದಿಂದ ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,ಸಾಕಷ್ಟು ಚರ್ಚೆಗೆ ಕಾರಣವಾಗಿದೆ..

ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯನ್ನು ಗೋಮೂತ್ರ ಹಾಗೂ ಗಂಜಲದಿಂದ ಶುದ್ಧೀಕರಣ ಮಾಡಡಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಕಳೆದ ಡಿಸೆಂಬರ್ 18ರಂದು ಶಿರಸಿಯ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬಳಿಕ ಬಿಜೆಪಿ ಕಚೇರಿಗೆ ಗೋಮೂತ್ರ ಹಾಗೂ ಗಂಜಲ ಹಾಕಿ ಶುದ್ಧೀಕರಣ ಮಾಡಲಾಗಿತ್ತು ಎನ್ನಲಾಗಿದೆ. ‌ಆದರೆ ಅಂದು ಆ ವಿಡಿಯೋ ಎಲ್ಲಿಯೂ ವೈರಲ್ ಆಗಿರಲಿಲ್ಲ ಎನ್ನಲಾಗಿದೆ..ಈ ಬಗ್ಗೆ ಬಿಜೆಪಿ ಮುಖಂಡರು ಬಹಿರಂಗವಾಗಿ ಹೇಳಿರುವುದು ಹಾಗೂ ಅದಕ್ಕೆ ಸಂಬಂಧಿಸಿದ ಸ್ವಚ್ಛತಾ ಕಾರ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗತ್ತಿದೆ.

ಕಾಂಗ್ರೆಸ್ ಕಾರ್ಯಕರ್ತರು ಕಚೇರಿಗೆ ಬಂದಿದ್ದ ಕಾರಣಕ್ಕೆ ಶುದ್ಧೀಕರಣ ನಡೆಸಲಾಗಿದೆ ಎಂದು ಹೇಳಿರುವ ವಿಡಿಯೋದಲ್ಲಿ , ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಶಿರಸಿ ನಗರ ಮಂಡಲ ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ..

ಅಸ್ಪೃಶ್ಯತೆ ಆಚರಣೆಯೇ?
ರಾಜಕೀಯ ವಿರೋಧಿಗಳ ಕಚೇರಿ ಪ್ರವೇಶದ ಬಳಿಕ ಗೋಮೂತ್ರ ಅಥವಾ ಗಂಜಲದಿಂದ ಶುದ್ಧೀಕರಣ ನಡೆಸಿರುವ ಕ್ರಮವು ಜಾತಿ-ಧರ್ಮದ ಆಚರಣೆ, ಅಸ್ಪೃಶ್ಯತೆ ಅಥವಾ ಸಾಮಾಜಿಕ ತಾರತಮ್ಯದ ಸಂದೇಶವನ್ನು ನೀಡುತ್ತದೆಯೇ ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟನೆ ನೀಡಬೇಕಿದೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಮತ್ತು ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಅಥವಾ ಸ್ಪಷ್ಟನೆ ನೀಡದೆ ಮೌನ ವಹಿಸಿರುವ ಹಿಂದಿನ ಉದ್ದೇಶದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ.

ಸಾರ್ವಜನಿಕವಾಗಿ ಅಸ್ಪೃಶ್ಯತೆ ಅಥವಾ ಸಾಮಾಜಿಕ ತಾರತಮ್ಯಕ್ಕೆ ಸಂಬಂಧಿಸಿದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.

ಇದನ್ನೂ ಓದಿ/ ತದಡಿಯಲ್ಲಿ ಬೋಟ್ ಮುಳುಗಡೆ : ಮೋಹನ್ ಕಿಮಾನಿ ಅವರಿಗೆ ಸೇರಿದ ಬೋಟ್