ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಾಯಗೊಂಡಿರುವ ಘಟನೆ ಕುಮಟಾ ಪಟ್ಟಣದ ಗೀಬ್ ಸರ್ಕಲ್ ಬಳಿ ನಡೆದಿದೆ.

ಗಾಯಗೊಂಡಿರುವ ವ್ಯಕ್ತಿಯನ್ನು ಹೊಸಹೆರವಟ್ಟಾ ನಿವಾಸಿ ಎಂದು ತಿಳಿದು ಬಂದಿದೆ, ಆತ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಂಟೇನರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ಬಳಿಕ ಕಂಟೇನರ್ ವಾಹನ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ ಎನ್ಬಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಹೊನ್ನಾವರ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪರಾರಿಯಾಗಿರುವ ಕಂಟೇನರ್ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಘಟನೆ ನಡೆದ ಸಂದರ್ಭದಲ್ಲಿ ಆತ ಮೃತ ಪಟ್ಟಿದ್ದಾನೆ ಎನ್ನುವ ಸುದ್ದಿ ಕುಮಟಾ ಪಟ್ಟದ ಸುತ್ತ ಹರದಾಡಿತ್ತು…

ಇದನ್ನೂ ಓದಿ/ಶಿರಸಿಯಲ್ಲಿ “ಗಂಜಲು ಶುದ್ದೀಕರಣ” : ವಿಡಿಯೋ ವೈರಲ್, ಅಸ್ಪೃಶ್ಯತೆ ಆಚರಣೆಯೇ..?