ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಕಾರವಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ವಿವಿಧ ವಿಭಾಗಗಳ ಕಡತಗಳನ್ನು ಪರಿಶೀಲನೆ ನಡೆಸಿದ್ದರು,
ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳ ತಂಡ ಲೋಕಾಯುಕ್ತ ಎಸ್ಪಿ ದಿನೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದೆ. ಸುಮಾರು 15 ಅಧಿಕಾರಿಗಳನ್ನೊಳಗೊಂಡ ತಂಡ ನಗರಸಭೆಯ ವಿವಿಧ ವಿಭಾಗಗಳಿಗೆ ತೆರಳಿ, ಕಡತಗಳ ವಿಲೇವಾರಿ, ಅಧಿಕಾರಿಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಕೆಲಸಗಳ ನಿರ್ವಹಣೆ ಕುರಿತು ಮಾಹಿತಿ ಸಂಗ್ರಹಿಸಿತು.
ನಗರಸಭೆಯಲ್ಲಿ ಹಲವು ವಿಭಾಗಗಳ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಅವುಗಳ ವಿಲೇವಾರಿ ಪ್ರಕ್ರಿಯೆ ಮತ್ತು ಕಚೇರಿ ಕಾರ್ಯನಿರ್ವಹಣೆಯ ಕುರಿತಂತೆ ವಿವರಗಳನ್ನು ಪಡೆದುಕೊಂಡರು. ಕಳೆದ ಮೂರು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಹಾಗೂ ಪರಿಶೀಲನೆ ನಡೆಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಕಾರವಾರ ನಗರಸಭೆ ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗಿದೆ. ಲೋಕಾಯುಕ್ತರ ಈ ಕಾರ್ಯಾಚರಣೆಯಿಂದ ನಗರಸಭೆ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ / ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ “ಸ್ಪೌಟ್ ಔಟ್”

