ಸುದ್ದಿಬಿಂದು ಬ್ಯೂರೋ

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದಾಗಿ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿತ್ತು. ಆದರೆ ಇದೀಗ ಮಳೆ ಪ್ರಮಾಣ ಕಮ್ಮಿಯಾಗಿರುವ ಕಾರಣ ನಾಳೆಯಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ಈ ಹಿಂದಿನಂತೆ ಪ್ರಾರಂಭವಾಗಲಿದೆ ಎಂದು ಜಿಲ್ಲಾಢಳಿತ ಖಚಿತಪಡಿಸಿದೆ.