ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ತಾಲೂಕಿನ ಅರಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ತಾಯಿ ಹಾಗೂ ಮಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಮಹಾರಾಷ್ಟ್ರದ ಪುಣೆಯ ಮೊಹಮದ್‌ವಾಡಿ, ಹಡಪ್ಸರ್ ನಿವಾಸಿಗಳಾದ ಮೃಣ್ಮಯಿ ರಾಜನ್ ಕುಲ್ಥೆ (32) ಹಾಗೂ ಶರ್ಮಿಳಾ ರಾಜನ್ ಕುಲ್ಥೆ (59) ಎಂದು ಗುರುತಿಸಲಾಗಿದೆ. ಹಿಂದಿನಿಂದ ವೇಗವಾಗಿ ಬಂದ KA-01/AN-1281 ನೋಂದಣಿ ಸಂಖ್ಯೆಯ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಮುಂದಕ್ಕೆ ಚಲಿಸಿ, ಮುಂದೆ ಸಾಗುತ್ತಿದ್ದ MH-02/FL-8622 ಸಂಖ್ಯೆಯ ಮತ್ತೊಂದು ಲಾರಿಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಮೃಣ್ಮಯಿ ಹಾಗೂ ಶರ್ಮಿಳಾ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಅಪಘಾತಕ್ಕೆ KA-01/AN-1281 ಲಾರಿಯ ಚಾಲಕನ ಅಜಾಗರೂಕ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ/ನಿವೃತ ಶಿಕ್ಷಕ ದಂಪತಿ ಸುಖದ ನಾಯಕ–ಭವಾನಿ ನಾಯಕಗೆ ಸನ್ಮಾನ