ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ: ಗಣೇಶ ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಮಹಿಳೆಯರು ಭಾಗವಹಿಸುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ಮತ್ತು ತಾಲೂಕು ವ್ಯಾಪ್ತಿಗಳಲ್ಲಿ ನಿಗದಿತ ದಿನಾಂಕಗಳಂದು ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.16ರಂದು ಬೆಳಗ್ಗೆ 6ರಿಂದ 24 ಗಂಟೆಗಳ ಕಾಲ ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.14ರಂದು ಬೆಳಗ್ಗೆ 6ರಿಂದ 24 ಗಂಟೆಗಳವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮುರ್ಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.24ರಂದು ಬೆಳಗ್ಗೆ 6ರಿಂದ 24 ಗಂಟೆಗಳವರೆಗೆ ಹಾಗೂ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.16ರಂದು ಬೆಳಗ್ಗೆ 6ರಿಂದ 48 ಗಂಟೆಗಳವರೆಗೆ ಮತ್ತು ಸೆ.20ರಂದು ಬೆಳಗ್ಗೆ 6ರಿಂದ 24 ಗಂಟೆಗಳವರೆಗೆ ನಿಷೇಧ ಜಾರಿಯಲ್ಲಿರುತ್ತದೆ.

ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.18 ಹಾಗೂ ಸೆ.22ರಂದು ತಲಾ 24 ಗಂಟೆಗಳ ಕಾಲ, ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.18 ಮತ್ತು ಸೆ.20ರಂದು ತಲಾ 24 ಗಂಟೆಗಳ ಕಾಲ ಹಾಗೂ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.17ರಂದು ಬೆಳಗ್ಗೆ 6ರಿಂದ 48 ಗಂಟೆಗಳವರೆಗೆ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಲಾಗಿದೆ.

ಕಾರವಾರ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.18, 20, 22 ಮತ್ತು 24ರಂದು ಬೆಳಗ್ಗೆ 6ರಿಂದ ತಲಾ 24 ಗಂಟೆಗಳ ಕಾಲ ಹಾಗೂ ಮಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.20 ಮತ್ತು ಸೆ.22ರಂದು ತಲಾ 24 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.15, 18 ಮತ್ತು 20ರಂದು ತಲಾ 24 ಗಂಟೆಗಳ ಕಾಲ ಹಾಗೂ ಸೆ.22ರಂದು ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ಮತ್ತು ಸಾಗಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಸೆ.18ರಂದು ಬೆಳಗ್ಗೆ 6ರಿಂದ ಸೆ.20ರ ಬೆಳಗ್ಗೆ 6ರವರೆಗೆ, ಸೆ.23ರಂದು 24 ಗಂಟೆಗಳ ಕಾಲ ಹಾಗೂ ಸೆ.25ರಂದು 24 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ ಸೆ.18ರಂದು 24 ಗಂಟೆಗಳ ಕಾಲ ಹಾಗೂ ಸೆ.20ರಂದು ಬೆಳಗ್ಗೆ 6ರಿಂದ ಸೆ.21ರ ಬೆಳಗ್ಗೆ 6ರವರೆಗೆ ನಿಷೇಧ ಜಾರಿಯಲ್ಲಿರುತ್ತದೆ.

ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ.18, 20, 22 ಮತ್ತು 26ರಂದು ತಲಾ 24 ಗಂಟೆಗಳ ಕಾಲ, ಯಲ್ಲಾಪುರ ಪಟ್ಟಣ, ಮಂಚಿಕೇರಿ ಹಾಗೂ ಕಿರವತ್ತಿ ವ್ಯಾಪ್ತಿಯಲ್ಲಿ ಸೆ.18, 20 ಮತ್ತು 24ರಂದು ತಲಾ 24 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ದಾಂಡೇಲಿ ತಾಲೂಕು ವ್ಯಾಪ್ತಿಯಲ್ಲಿ ಸೆ.18, 20, 22 ಮತ್ತು 25ರಂದು ತಲಾ 24 ಗಂಟೆಗಳ ಕಾಲ, ಹಳಿಯಾಳ ತಾಲೂಕು ವ್ಯಾಪ್ತಿಯಲ್ಲಿ ಸೆ.18, 20, 22 ಮತ್ತು 24ರಂದು ತಲಾ 24 ಗಂಟೆಗಳ ಕಾಲ ನಿಷೇಧ ಜಾರಿಯಲ್ಲಿರುತ್ತದೆ. ಜೋಯಿಡಾ ತಾಲೂಕು ವ್ಯಾಪ್ತಿಯಲ್ಲಿ ಸೆ.20 ಮತ್ತು 22ರಂದು 24 ಗಂಟೆಗಳ ಕಾಲ ಹಾಗೂ ಸೆ.24ರಂದು ಬೆಳಗ್ಗೆ 6ರಿಂದ 48 ಗಂಟೆಗಳವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.20, 22 ಮತ್ತು 25ರಂದು ಬೆಳಗ್ಗೆ 6ರಿಂದ ತಲಾ 24 ಗಂಟೆಗಳ ಕಾಲ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಲಾಗಿದೆ.

ಈ ಅವಧಿಯಲ್ಲಿ ವೈನ್ ಶಾಪ್, ಬಾರ್ ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಂಬಂಧಪಟ್ಟವರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ/ಬಳ್ಳಾರಿ ಚಲೋ ಸಮಾರೋಪದಲ್ಲಿ ರೂಪಾಲಿ ನಾಯ್ಕ ಗುಡುಗು: ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ