ಸುದ್ದಿಬಿಂದು ಬ್ಯೂರೋ‌ ವರದಿ
ಬೆಂಗಳೂರು : ಪಾಲಿಕೆ ಸೇವೆಯಲ್ಲಿ ಸಲ್ಲಿಸಿದ ಉತ್ತಮ ಸೇವೆಯನ್ನು ಗುರುತಿಸಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದಿಪುರ ಅಗ್ರಹಾರದ ವಿನಾಯಕ ನಾಯ್ಕ (ವಿನು) ಅವರಿಗೆ ಪ್ರತಿಷ್ಠಿತ ಸರ್.ಎಂ. ವಿಶ್ವೇಶ್ವರಯ್ಯ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು..

ಬೆಂಗಳೂರಿನಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ–ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿನಾಯಕ ವಾಸುದೇವ ನಾಯ್ಕ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲಿಕೆ ಸೇವೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ವಿವಿಧ ಅಧಿಕಾರಿಗಳು ಹಾಗೂ ನೌಕರರನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಹಳದಿಪುರ ಅಗ್ರಹಾರದ ವಿನಾಯಕ ನಾಯ್ಕ (ವಿನು) ಅವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿರುವುದು ಗಮನಾರ್ಹವಾಗಿದೆ. ಪಾಲಿಕೆ ಆಡಳಿತ ಹಾಗೂ ಸಾರ್ವಜನಿಕ ಸೇವೆಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ಉತ್ತಮ ಕಾರ್ಯಕ್ಷಮತೆ ತೋರಿದ ಸಿಬ್ಬಂದಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ವಿನಾಯಕ ನಾಯ್ಕ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಹಳದಿಪುರ ಸೇರಿದಂತೆ ಹೊನ್ನಾವರ ತಾಲೂಕಿನ ಜನರಿಗೆ ಹೆಮ್ಮೆಯ ಸಂಗತಿಯಾಗಿದ್ದು, ಕುಟುಂಬಸ್ಥರು, ಸ್ನೇಹಿತರು, ಬಂಧುಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸಮಾರಂಭದಲ್ಲಿ ಸಂಘದ ಪದಾಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಅವರ ಸಾರ್ವಜನಿಕ ಸೇವೆ ಹಾಗೂ ಆಡಳಿತ ದಕ್ಷತೆಯ ಆದರ್ಶಗಳನ್ನು ಸ್ಮರಿಸಲಾಯಿತು

ಇದನ್ನೂ ಓದಿ//ಹಬ್ಬದ ಸಂಭ್ರಮದ ಬೆನ್ನಲ್ಲೇ ಸಾವಿನ ಸರಣಿ; ಒಂದೇ ಕುಟುಂಬದ ಮೂವರು ಸೇರಿ ಹಲವರು ಬಲಿ