ಹಾವೇರಿ : ಕೊಲೆ ಮಾಡುವ ಉದ್ದೇಶದಿಂದ ಎಸ್‌ಬಿಐ ಬ್ಯಾಂಕಿನ ಮ್ಯಾನೇಜರ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಹಾವೇರಿಯ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ನಡೆದಿದೆ.

ಜಯರಾಮ್ ಕೊಲ್ಲಾಪೂರ (58) ವಯಸ್ಸಿನ ಮ್ಯಾನೇಜರ್ ಎಂಬುವವರ ಮೇಲೆ ಎರಡು ಬೈಕಿನಲ್ಲಿ ಬಂದ ನಾಲ್ಕರು ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.

ಡಿಸಿ ಆಪೀಸಗೆ ತೆರಳಿದ್ದ ಮ್ಯಾನೇಜರ ಮಗನ ಜೊತೆ ಬೈಕಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಚಾಕುವಿನಿಂದ ಮೂರು ಬಾರಿ ಇರಿದು ಕೊಲೆಗೆ ಪ್ರಯತ್ನಿಸಲಾಗಿದೆ. ಗಾಯಗೊಂಡ ಜಯರಾಮ್ ಅವರನ್ನ ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆ ಹುಬ್ಬಳ್ಳಿಯ ಕಿಮ್ಸ್ ರವಾನೆ ಮಾಡಲಾಗಿದೆ.
ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.