ಸುದ್ದಿಬಿಂದು ಬ್ಯೂರೋ
ಕಾರವಾರ : ಬೈಕಿಗೆ ಕಾರು ಡಿಕ್ಕಿ(Bike Car Accident ) ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಉತ್ತರಕನ್ನಡ (uttara kannda) ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ (National Highway 66) ಬಿಣಗಾ ಸಮೀಪದ ಕರಿದೇವಸ್ಥಾನದ ಬಳಿ ಸಂಭವಿಸಿದೆ.

ಅಂಕೋಲಾ ತಾಲೂಕಿನ ಅಗಸೂರು ಹೊನ್ನಳ್ಳಿ ನಿವಾಸಿ ಪ್ರವೀಣ ಕೇಶವ ಗೌಡ (25) ಮೃತ ವ್ಯಕ್ತಿಯಾಗಿದ್ದು ಈತ ಕಾರವಾರದಿಂದ ಅಂಕೋಲಾ ಕಡೆ ಕೆ.ಎ30 ಎಕ್ಸ್ 0740 ಮೇಲೆ ಬರುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಅಂಕೋಲಾ ಕಡೆಯಿಂದ ಕಾರವಾರ ಕಡೆ ಸಾಗುತ್ತಿದ್ದ ಜಿ.ಎ08 ಎಂ 0220ನೋಂದಣಿ ಸಂಖ್ಯೆಯ ಕಾರು ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಲಾಯಿಸಿ ರಸ್ತೆಯ ವಿರುದ್ಧ ದಿಕ್ಕಿಗೆ ಬಂದು ಬೈಕಿಗೆ ಮುಂಬದಿಯಿಂದ ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.

ಅಪಘಾತದಲ್ಲಿ ತಲೆಯ ಹಿಂಬದಿಗೆ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಪ್ರವೀಣ ಕೇಶವ ಗೌಡ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಕಾರವಾರ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿತ ಕಾರು ಚಾಲಕ ಗೋವಾ(Goa)ನಾವೆಲಿಂ ನಿವಾಸಿ ಶೇಖ್ ಮೌಲಾ ಅಲಿ ಶೇಖ್ ಅಬ್ದುಲ್ ಎನ್ನುವವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.