ಸುದ್ದಿಬಿಂದು ಬ್ಯೂರೋ
ಕಾರವಾರ : ಬರಲಿರುವ ಲೋಕಸಭಾ ಚುನಾವಣೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರದ ಹಿಂದುಳಿದ ವರ್ಗದ ಮೀನುಗಾರ ಸಮಾಜದ ನಾಯಕರಾದ ಪ್ರಮೋದ್ ಮಧ್ವರಾಜ್ ರವರಿಗೆ ಟಿಕೆಟ್ ನೀಡುವಂತೆ ಅಖಿಲ ಭಾರತ ಮೀನುಗಾರರ ಸಂಘದ ಒತ್ತಾಯಿಸಿದೆ.
ಅವರು ಇಂದು ಉತ್ತರಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಟಿಯನ್ನ ಉದ್ದೇಶಿಸಿ ಮಾತನಾಡಿದರು. 2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ . ರಾಜ್ಯದ ಜನಸಂಖ್ಯೆಯು 50%ರಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಟಿಕೆಟ್ ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದು ಇನ್ನೂ ಹೆಣಗಾಡುತ್ತಿದ್ದಾರೆ. ನಮ್ಮ ಸಮಾಜವನ್ನ ಬಹಳ ಸಮಯದಿಂದ ನಿರ್ಲಕ್ಷಿಸಲಾಗಿದ್ದು ನಮ್ಮ ಸವಾಲುಗಳನ್ನು ಅರ್ಥಮಾಡಿಕೊಳ್ಳುವ ಮತ್ತು ರಾಜಕೀಯ ವೇದಿಕೆಗಳಲ್ಲಿ ನಮ್ಮ ಸದುದ್ದೇಶವನ್ನು ಸಮರ್ಥವಾಗಿ ಸಮರ್ಥಿಸುವ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಮೋದ್ ಮಧ್ವರಾಜ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಮೋದ್ ಮಧ್ವರಾಜ್ ಅರವರು ರಾಜಕೀಯ ಹಿನ್ನೆಲೆಯಿಂದ ಬಂದವರಾಗಿದ್ದು, ಕಳೆದ12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರದ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಸಾರ್ವಜನಿಕ ಸೇವೆಯಲ್ಲಿ ಸಮಾಜದ ಹಿತಾಸಕ್ತಿಗಳ ಬಗ್ಗೆ ಪರಿಣಾಮಕಾರಿಯಾಗಿ ಪ್ರತಿನಿಧಿಸಿ ಅಂತರ್ಗತ ಬೆಳವಣಿಗೆ ಮತ್ತು ಸಾಮಾಜಿಕ ಆರ್ಥಿಕ ಪ್ರಗತಿಗೆ ಭವಿಷ್ಯದ ಯೋಜನೆ ಮತ್ತು ಬೆಳವಣಿಗೆಗೆ ಅವರ ಸಾಬೀತಾದ ಬದ್ಧತೆಯು ಅಸಂಘಟಿತ ವ್ಯಕ್ತಿಗಳ ವಿಶ್ವಾಸ ಮತ್ತು ಮೆಚ್ಚುಗೆ ಪಡೆದವರಾಗಿದ್ದು, ಪ್ರಮೋದ್ ಮಧ್ವರಾಜ್ ರವರ ಪರಿಶ್ರಮ, ತ್ಯಾಗ, ಸಮರ್ಪಣೆ, ಚತುರ ಸಂಘಟಣೆಯಿಂದ ಸಮಾಜದ ನಿರಂತರ ಸಂಪರ್ಕ ಹಾಗೂ ರಕ್ತಗತವಾಗಿ ಬಂದಿರುವ ತನ್ನ ಸೇವಾ ಭಾವನೆಯನ್ನು ಅನೇಕ ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಟ್ರಸ್ಟ್ ಮುಖೇನ ಸಮಾಜದ ಎಲ್ಲಾ ಜಾತಿ ಮತ ಧರ್ಮಗಳ ಕಷ್ಟ ಕಾರ್ಪಣ್ಯಗಳಿಗೆ ದುಡಿದ ಸಂಪತ್ತನ್ನು ಆರ್ಥಿಕ ಸಹಾಯಕರಾಗಿ ಸಮರ್ಪಿಸುತ್ತಿರುವ ನೆಚ್ಚಿನ ರಾಜಕಾರಣಿಯಾಗಿರುತ್ತಾರೆ.
ನರೇಂದ್ರ ಮೋದಿಯವರ ವರ್ಚಸ್ವಿ ನೇತ್ರತ್ವದಲ್ಲಿ ದೇಶದ ಆದ್ಭುತ ಪ್ರಗತಿ. ದೇಶದ ರಕ್ಷಣೆ. ಭಯೋತ್ಪಾದನೆ ನಿಗ್ರಹ, ವಿದೇಶಿ ನೀತಿ, ಭ್ರಷ್ಟಾಚಾರ ರಹಿತ ಆಡಳಿತ, ಭವಿಷ್ಯದ ಯೋಜನೆ ಮತ್ತು ಬಿಜೆಪಿಯ ನೈಜ ರಾಷ್ಟ್ರೀಯತೆಗೆ ಆಕರ್ಷಿತರಾಗಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಸಮಾಜದ ನಿರಂತರ ಸಂಪರ್ಕದೊಂದಿಗೆ ಪಕ್ಷದ ಸಂಘಟನೆ ಮತ್ತು ಬೆಳವಣಿಗೆಗೆ ಸಾಮಾನ್ಯ ವ್ಯಕ್ತಿಯಾಗಿ ತನ್ನನ್ನು ತಾನು ತೊಡಗಿಸಿಕೊಂಡ ಯೋಗ್ಯ ವ್ಯಕ್ತಿಯಾಗಿರುವ ಹಿಂದುಳಿದ ವರ್ಗದ ಮೀನುಗಾರ ಸಮಾಜದ ನಾಯಕರಾಗಿರುವ ಪ್ರಮೋದ್ ಮಧ್ವರಾಜ್ ರವರಿಗೆ ಸಮಾಜವ ಅವರ ಬೆನ್ನಿಗೆ ನಿಂತು ಬೆಂಬಲವನ್ನು ನೀಡುವುದರಲ್ಲಿ ಅನುಮಾನವಿಲ್ಲ. ಆದ್ದರಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರವೊಂದರಲ್ಲಿ ಮಾತ್ರ ಸ್ಪರ್ದಿಸಲು ಅವಕಾಶವಿದ್ದು, ಹೀಗಾಗಿ ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದಿಂದ ಮದ್ವರಾಜ್ ಅವರಿಗೆ ನೀಡುವಂತೆ ಒತ್ತಾಯಿಸಿದರು.