suddibindu.in
ಮುಂಡಗೋಡ: ಉತ್ತರ ಕನ್ನಡ(uttar kannada) ಜಿಲ್ಲೆಯ ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಲಾರಿ ಸಂಪೂರ್ಣ ಜಖಂಗೊಂಡು ಚಾಲಕರಿಬ್ಬರೂ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಇದನ್ನೂ ಓದಿ:
- ರೌಡಿಶೀಟರ್ಗಳ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಮುರುಡೇಶ್ವರದಲ್ಲಿ ತಡರಾತ್ರಿ ಘಟನೆ
- ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ರೂಪಾಲಿ ನಾಯ್ಕ ಕರೆ
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ
(sirsi) ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ.
ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ (Kalaburgi) ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದ್ದು,ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.




