rescue of tourists who were drowning in the sea
suddibindu.in
Karwar: ಕಾರವಾರ :ಸಮುದ್ರದಲ್ಲಿ ಈಜಲು ತೆರಳಿ ಮುಳುಗುತ್ತಿದ್ದ ಮೂವರು ಪ್ರವಾಸಿಗರನ್ನು(Tourists) ಸ್ಥಳದಲ್ಲಿದ್ದ ಲೈಫ್ ಗಾರ್ಡ್ ಗಳು ರಕ್ಷಣೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಕುಡ್ಲೇ ಬೀಚ್ (Kudlay Beach) ನಡೆದಿದೆ.
ಬೆಂಗಳೂರು ಮೂಲದ ಸ್ಮಿತಾ ರವಿಚಂದ್ರನ್ (23) ನಿಹಾರಿಕಾ ಗಿರಿ (22) ಪವಿತ್ರ ಸುಂದರ್ (22) ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗರು.(Bangalore Tourists) ಗೋಕರ್ಣ ಪ್ರವಾಸಕ್ಕೆ ಆಗಮಿಸಿದ್ದ ಇವರು ಕುಡ್ಲೇಬೀಚಿನಲ್ಲಿ ಈಜಲು ತೆರಳಿದ್ದಾಗ ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು.
ಇದನ್ನೂ ಓದಿ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ
- Big Breaking /ಸುಂಕಸಾಳ ಬಳಿ ಸರಣಿ ಅಪಘಾತ : ಹಲವರಿಗೆ ಗಂಭೀರ ಗಾಯ
ಇದನ್ನ ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳಾದ ನವೀನ್ ಅಂಬಿಗ, ಮಂಜುನಾಥ್ ಹರಿಕಂತ್ರ ತಕ್ಷಣ ಧಾವಿಸಿ ಮುಳುಗಡೆಯಾಗುತ್ತಿದ್ದ ಪ್ರವಾಸಿಗರನ್ನ ರಕ್ಷಣೆ ಮಾಡಿದ್ದಾರೆ.





