suddibindu.in
ಕುಮಟಾ : ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಆದೇಶದಂತೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗಜು ನಾಯ್ಕ,ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ವಿಭಾಗ, ಕೆಪಿಸಿಸಿ ಇವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳಿಗೆ ನೀಡಲಾಗಿದ್ದ ಅಮಾನತು ಆದೇಶವನ್ನ ಹಿಂಪಡೆದಿರುವ ಬಗ್ಗೆ ಆದೇಶಿಸಲಾಗಿದೆ.

- ಕುಮಟಾ ತಾಲೂಕ ಪಂಚಾಯತ್ ಅಧಿಕಾರಿಗಳ ಕರ್ತವ್ಯ ಲೋಪ ಅಧಿಕಾರ ದುರುಪಯೋಗದ ವಿರುದ್ಧ ಗಜಾನನ ಹಳ್ಳೆರ ತೀವ್ರ ಆಕ್ರೋಶ
- DK ಶಿವಕುಮಾರ್ ಕೂಡ ಮುಖ್ಯಮಂತ್ರಿ ಆಗಬೇಕು ಪ್ರಣವಾನಂದ ಸ್ವಾಮೀಜಿ ಹೇಳಿಕೆ
- ’45’ ಚಿತ್ರದ ‘AFRO ಟಪಾಂಗ್’ ಹಾಡಿಗೆ ಜಾಗತಿಕ ಹವಾ: 28.5 ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್!
ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ನಿವೇದಿತ್ ಆಳ್ವ ಇವರ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರಿಗೆ ಮಾಡಿದ ಶಿಫಾರಸ್ಸಿನ ಮೇರೆಗೆ ಉತ್ತರಕನ್ನಡ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ್ ಕೇಶವ್ ಗಾಂವಕರ್ ಇವರ ವರದಿಯನ್ನು ಆದರಿಸಿ ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯೊಂದಿಗೆ ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳಿಂದ ಅಮಾನತ್ತು ಮಾಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ.





