Suddibindu.in
Karwar,ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ ಸಾವಿರಾರು ಯುವಕರು ಪಾಲ್ಗೊಂಡರು. ಯುವಕರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಸತೀಶ್ ಸೈಲ್ ಕೂಡ ಬೈಕ್ನಲ್ಲಿ ಸಾಗಿ ಗಮನ ಸೆಳೆದರು.
ಇದನ್ನೂ ಓದಿ
- ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ರೂಪಾಲಿ ನಾಯ್ಕ ಕರೆ
- ಸಚಿವ ಸ್ಥಾನ ಕೈತಪ್ಪಿದ ಬಳಿಕ ಮೌನ ಮುರಿದ ಮಂಕಾಳ ವೈದ್ಯ; ಸಿಎಂ ಕರೆ ಬಗ್ಗೆ ಬಿಚ್ಚಿಟ್ಟ ಸತ್ಯ
- ಹಾಡುಹಗಲೇ ಗ್ರಾ.ಪಂ ಮಾಜಿ ಅಧ್ಯಕ್ಷನ ಶೂಟೌಟ್
ಮಿತ್ರ ಸಮಾಜ- ಕಾಜುಬಾಗ- ಕೋಡಿಬಾಗ ರಸ್ತೆ ಮೂಲಕ ಟೋಲ್ನಾಕಾ, ಸುಂಕೇರಿ ರಸ್ತೆ ಮೂಲಕ ಪುನಃ ಮಿತ್ರ ಸಮಾಜದಲ್ಲಿ ರ್ಯಾಲಿ ಸಮಾಪ್ತಿಗೊಳ್ಳಲಿದೆ.




