Suddibindu.in
Karwar,ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ ಸಾವಿರಾರು ಯುವಕರು ಪಾಲ್ಗೊಂಡರು. ಯುವಕರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಸತೀಶ್ ಸೈಲ್ ಕೂಡ ಬೈಕ್ನಲ್ಲಿ ಸಾಗಿ ಗಮನ ಸೆಳೆದರು.
ಇದನ್ನೂ ಓದಿ
- ಕೆರೆಯಲ್ಲಿ ಮುಳುಗಿ ಸಹೋದರರಿಬ್ಬರ ಸಾವು
- ಮಹಿಳೆಯರ ಸ್ವಾವಲಂಬನೆಗೆ ರೋಟರಿ ನೆರವು ಶ್ಲಾಘನೀಯ : ಶಾಸಕ ಭೀಮಣ್ಣ ನಾಯ್ಕ
- ಚಾಂಪಿಯನ್ ಆಗಿ ಹೊರಹೊಮ್ಮಿದ ರಂಜನ್ ಚಾಲೆಂಜರ್ಸ್ ಭಟ್ಕಳ
ಮಿತ್ರ ಸಮಾಜ- ಕಾಜುಬಾಗ- ಕೋಡಿಬಾಗ ರಸ್ತೆ ಮೂಲಕ ಟೋಲ್ನಾಕಾ, ಸುಂಕೇರಿ ರಸ್ತೆ ಮೂಲಕ ಪುನಃ ಮಿತ್ರ ಸಮಾಜದಲ್ಲಿ ರ್ಯಾಲಿ ಸಮಾಪ್ತಿಗೊಳ್ಳಲಿದೆ.




