suddibindu.in
Karwar ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- ಶಿರಾಲಿ ದುರಂತ: ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಮಂಕಾಳ ವೈದ್ಯ : ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ಹೊತ್ತ ಸಚಿವರು
- ಶಿರಾಲಿ ದುರಂತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ ನಾಪತ್ತೆಯಾಗಿದ್ದ ಇಬ್ಬರ ಶವ ಪತ್ತೆ, ಮತ್ತೊಬ್ಬರಿಗಾಗಿ ಶೋಧ
- Exclusive ಭಟ್ಕಳದ ಶಿರಾಲಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ 8ಮಂದಿ ಸಾವನ್ನಪ್ಪಿರುವ ಶಂಕೆ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಂಸದ ಹೆಗಡೆ ಹೆಸರಿನಲ್ಲಿ ‘ಮತ್ತೊಮ್ಮೆ ದೇಶ ವಿರೋಧಿ ಶಕ್ತಿಗಳ ವಿರುದ್ಧ ನಿಲುವ ಕಾಲ ಬಂದಿದೆ. ನಾವೆಲ್ಲರೂ ಪ್ರಧಾನ ಸೇವಕ ನರೇಂದ್ರ ಮೋದಿಯವರ ಬೆನ್ನಿಗೆ ನಿಂತು ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಲೇ ಬೇಕಾಗಿದೆ. ಜಿಲ್ಲೆಯಲ್ಲಿ ಮತ್ತೊಮ್ಮೆ ಬಿಜೆಪಿ ಧ್ವಜವನ್ನು ಹಾರಿಸಬೇಕಿದೆ’ ಎಂದು ಅನಂತಕುಮಾರ ಹೆಗಡೆಯವರೇ ಹೇಳಿಕೆ ನೀಡಿದ ರೀತಿಯಲ್ಲಿ ಅವರ ಫೊಟೊದೊಂದಿಗೆ ಸುಳ್ಳು ಪೋಸ್ಟರ್ವೊಂದನ್ನು ‘ಬಿಜೆಪಿ ಉತ್ತರ ಕನ್ನಡ ಲೋಕಸಭಾ 2024’ ಎಂಬ ವಾಟ್ಸ್ಅಪ್ ಗ್ರೂಪ್ನಲ್ಲಿ ಹರಿಬಿಡಲಾಗಿತ್ತು.
ಅನಂತಕುಮಾರ್ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ದುರುಪಯೋಗಪಡಿಸಿಕೊಂಡು ಅವರ ಗೌರವ ಘನತೆಗೆ ಚ್ಯುತಿ ಬರುವ ಹಾಗೇ ಮಾಡಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುರೇಶ್ ಶೆಟ್ಟಿಯವರು ಗ್ರೂಪ್ನಲ್ಲಿ ಸಂದೇಶ ಹರಿಬಿಟ್ಟ ಎ.ಜಿ.ನಾಯ್ಕ ಸಿದ್ದಾಪುರ ಎನ್ನುವವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.




