suddibindu.in
ಭಟ್ಕಳ: ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಹದಿನೈದು ಮಂದಿಗಳ ಪೈಕಿ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ನಡೆದಿದೆ.
- ರಾಜ್ಯದಲ್ಲಿ ಹವಾಮಾನ ಬದಲಾವಣೆ; ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
- ಜನಮನ ರಂಜಿಸಿದ ಬಿಎಲ್ ಈವೆಂಟ್ಸ್ ಮತ್ತು ಪ್ರೊಡಕ್ಷನ್ ರಸಮಂಜರಿ : ಕರಾವಳಿ–ಮಲೆನಾಡು ತಂಡದಿಂದ ಸಂಗೀತ ರಸದೌತಣ
- ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿ.ಕೆ.ಶಿವಕುಮಾರ್
ಸೂರಜ್ ನಾಯ್ಕ್ (15),ಪಾರ್ವತಿ ಶಂಕರ ನಾಯ್ಕ (35) ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಮೃತರು ಕಂಡೆಕೋಡ್ಲು ನಿವಾಸಿಗಳಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಸೇರಿ ಹೊಳೆಯಲ್ಲಿ ಸ್ನಾನ ಮಾಡಲು ತೆರಳಿದ್ದರು. ಈ ವೇಳೆ ಕಾಲು ಜಾರಿ ಇಬ್ಬರೂ ನೀರಿನಲ್ಲಿ ಮುಳುಗಡೆಯಾಗಿ ಮೃತಪಟ್ಟಿದ್ದಾರೆ. ಮೃತರ ಇಬ್ಬರೂ ಶವವನ್ನ ಹೊರತೆಗೆಯಲಾಗಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ.




