suddibindu.in
ಗೋಕರ್ಣ : ಪ್ರವಾಸಿಗರನ್ನ ಹೊತ್ತೋಯ್ದ ಬೋಟ್ ಮುಳುಗಡೆಯಾಗಿ ಬೋಟ್ನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದೆ.
- ಬರ್ಗಿ–ಕಿಮಾನಿ ರಸ್ತೆಗೆ ಬೆಳಕು ಕೊಡಿ; ದಾರಿ ದೀಪ ದುರಸ್ತಿಗೆ ಗ್ರಾಮಸ್ಥರ ಒತ್ತಾಯ
- ಅರ್ಹರಿಗೆ ಮತದಾನದ ಹಕ್ಕು ಒದಗಿಸುವಲ್ಲಿ ವಿಫಲರಾಗಬಾರದು : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ
- “ಜಡ್ಡಿಕೆರೆಗೆ ಜಿಗಿದ ಪಿಎಸ್ಐ!” ವಿದ್ಯಾರ್ಥಿಯ ಮೃತದೇಹ ಮೇಲಕ್ಕೆತ್ತಿದ ಖಾದರ್ ಭಾಷಾ
ರವಿವಾರ ರಜಾ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದರು. ಘಟನೆಯಲ್ಲಿ ಬೋಟಿನಲ್ಲಿದ್ದ 40ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬೋಟ್ ಮುಡಂಗಿಯ ಗಣೇಶ್ ಎಂಬುವವರಿಗೆ ಸೇರಿದ್ದಾಗಿದೆ. ಘಟನೆ ನಡೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ಮತ್ತು ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಎಲ್ಲರನ್ನು ರಕ್ಷಣೆ ಮಾಡಿದ್ದಾರೆ.
ಬೋಟ್ನಲ್ಲಿ ಮಿತಿಗಿಂತ ಹೆಚ್ಚಿನ ಪ್ರವಾಸಿಗರನ್ನ ತುಂಬಿರುವುದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




