suddibindu.in
ವಿಜಯಪುರ : ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ ತಡೆದು ಹಣ ದರೋಡೆ ಮಾಡಿದ ಐವರು ಆರೋಪಿಗಳನ್ನ ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
.
- ಹೋರಿಗಳ ಕಾಳಗ – ಮನೆಗೆ ಹಾನಿ : ದ್ವಿಚಕ್ರ ವಾಹನ ಜಖಂ
- 300 ಕೋಟಿ ಆಸ್ತಿ ಪ್ರಕರಣ; ಕಾರವಾರದಲ್ಲಿ ಸಿದ್ದೀಕ್ ಮನೆಗೆ ಇಡಿ ದಾಳಿ
- ಸರ್ವೇಶ್ವರ ದೇವಾಲಯದ ಹೆಬ್ಬಾಗಿಲು ಉದ್ಘಾಟಿಸಿದ ರೂಪಾಲಿ ನಾಯ್ಕ
ದರೋಡೆ ಪ್ರಕರಣದಲ್ಲಿ ಸುನೀಲ ವಡ್ಡರ (21), ಶಿವಾನಂದ ದಳವಾಯಿ 21) ಮಹಾಂತೇಶ ತಳವಾರ (35), ಧರೇಶ ದಳವಾಯಿ (21), ಶಿವಪ್ಪ ಮಾಶ್ಯಾಳ (39), ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೂ ಚಂದ್ರಕಾಂತ ಕುಂಬಾರ ಅವರಿಗೆ ಸಂಬಂಧಿಸಿದ ಹತ್ತಿಯನ್ನು ಧಾರವಾಡ ಜಿಲ್ಲೆಯ ಅಮೀನ ಬಾವಿಯಲ್ಲಿರುವ ಅನೀಲಕುಮಾರ & ಕಂಪನಿಗೆ ಮಾರಾಟ ಮಾಡಿದ 32,29,364 ಹಣವನ್ನು ತೆಗೆದುಕೊಂಡು ಊರಿಗೆ ತೆರಳುವ ಸಂದರ್ಭದಲ್ಲಿ ಕೋಲ್ಹಾರ ಹೊರಭಾಗದಲ್ಲಿ ವಾಹನ್ ಅಡ್ಡಗಟ್ಟಿ ದರೋಡೆ ಮಾಡಿದ್ದರು.
ಇನ್ನೂ ಕೃತ್ಯದಲ್ಲಿ ಶಾಮೀಲಿದ್ದ ಕ್ಯಾಂಟರ್ ಚಾಲಕ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿತರಿಂದ ಕೃತ್ಯಕ್ಕೆ ಬಳಸಿದ ವಾಹನ, ಬಡಿಗೆ, ರಾಡ್ ಹಾಗೂ ಸುಲಿಗೆಯಾದ ಹಣದ ಪೈಕಿ 31,04,364 ರೂಪಾಯಿ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳಿಗೆ ನ್ಯಾಯಾಂಗ ಇಂಧನಕ್ಕೆ ಒಪ್ಪಿಸಲಾಗಿದೆ..






