suddibindu.in
ಕುಮಟಾ : ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಎದುರಿಗೆ ಬಂದ ಆಕಳ ಕರು ತಪ್ಪಿಸಲು ಹೋಗಿ ಬೈಕ್ ಪಲ್ಟಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದೀವಳ್ಳಿಯಲ್ಲಿ ನಡೆದಿದೆ.
ಕೆಕ್ಕಾರದ ರತ್ನಾಕರ ರಾಮ ಗೌಡ (27) ಗಂಭೀರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಆಕಳು ಕರು ಒಂದು ಅಡ್ಡ ಬಂದಿದೆ. ಈ ವೇಳೆ ಬೈಕ್ ಸವಾರ ಆಕಳು ಕರುವನ್ನ ತಪ್ಪಿಸಲು ಪ್ರಯತ್ನಿಸಿದ್ದಾನೆ.
ಇದನ್ನೂ ಓದಿ
- ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ: 94.1% ಪಾಸ್, ದಕ್ಷಿಣ ಕನ್ನಡ ನಂ.1 ಉಡುಪಿ ದ್ವಿತೀಯ, ಉತ್ತರಕನ್ನಡಕ್ಕೆ 3ನೇ ಸ್ಥಾನ
- ನಾಳೆಯೇ SSLC ಫಲಿತಾಂಶ ಪ್ರಕಟ: ಮಧ್ಯಾಹ್ನ 12 ಗಂಟೆಗೆ ರಿಸಲ್ಟ್ ಲಭ್ಯ
- ಗೂಡ್ಸ್ ಲಾರಿ, ಬುಲೆರೋ ಅಪಘಾತ : ಬೆಂಕಿಯ ಕೆನ್ನಾಲೆಗೆ : ಚಾಲಕ ಸಜೀವ ದಹನ
ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನಿಗೆ ತಕ್ಷಣ ಕುಮಟಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.




