ಅಂಕೋಲಾ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿದ್ದು ಅಂಕೋಲಾ ಪಟ್ಟಣ ಜಲಾವೃತವಾಗದೆ. ಭಾರೀ ಮಳೆಗೆ ಪಟ್ಟಣದಲ್ಲಿನ ಅಂಗನವಾಡಿ ಒಳಗೆ ನೀರು ನುಗ್ಗಿ ಅಂತಾರ ಉಂಟಾಗಿರುವ ಘಟನೆ ನಡೆದಿದೆ.
- Breaking/BEO ಭೇಟಿ ಬಳಿಕ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
- ಪೊಲೀಸ್ ಸ್ಟೇಷನ್ಲ್ಲಿ ಡೀಲ್, ಮೈದಾನದಲ್ಲಿ ಟ್ರ್ಯಾಪ್ : ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ಬಂಧನ
- ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಚೆನೈನಲ್ಲಿ ಚಿರಾಗ್ಗೆ ಬಂಧಿಸಿದ ಪೊಲೀಸರು
ನಗರದ ರಸ್ತೆಯ ತುಂಬೆಲ್ಲಾ ನೀರು ನಿಂತು ಸಂಚಾರ ಅಸ್ಥವ್ಯಸ್ಥವಾಗಿತ್ತು. ಏಕಾಏಕಿ ತಗ್ಗು ಪ್ರದೆಶಕ್ಕೆ ನೀರು ನುಗ್ಗಿದ್ದರಿಂದ ಕೆಲಕಾಲ ಸಂಕಷ್ಠದ ಪರಿಸ್ಥಿತಿ ತಂದೊಡ್ಡಿತ್ತು. ಈ ವೇಳೆ ಕಾಲುವೆಯಲ್ಲಿ ನೀರು ಹರಿಯದೇ ಅಂಗನವಾಡಿಯ ಒಳಗೆ ನುಗ್ಗಿದೆ. ಅದೃಷ್ಟವಶಾತ್ ಮಕ್ಕಳು ಮನೆಗೆ ಹೋಗಿದ್ದರಿಂದ ಹೆಚ್ಚಿನ ಅನಾಹುತತಪ್ಪಿದ್ದು ಅಂಗನವಾಡಿಯ ಸಿಬ್ಬಂದಿಯು ನೀರು ತೆಗೆಯಲು ಹರ ಸಾಹಸ ಪಟ್ಟರು. ಇನ್ನು ಕರ್ನಾಟಕದ ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.







