suddibindu.in
Karwar: ಕಾರವಾರ : ಉತ್ತರಕನ್ನಡ ಜಿಲ್ಲೆಯ( Uttar Kannada district) ಕರಾವಳಿ ತಾಲೂಕು ಸೇರಿದಂತೆ ಜಿಲ್ಲಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹವಮಾನ ಇಲಾಖೆ ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್(Red alert) ಘೋಷಣೆ ಮಾಡಿದೆ.
ಜಿಲ್ಲೆಯ ಕಾರವಾದಿಂದ ಹಿಡಿದು ಕರಾವಳಿ ತಾಲೂಕು ಸೇರಿ ಮಲೆನಾಡು ಹಾಗೂ ಬಯಲು ಸೀಮೆ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದಲೂ ಮಳೆ ಆರ್ಭಟ ಜೋರಾಗಿದೆ. ಎರಡು ದಿನಗಳ ಕಾಲ ಸುರಿದ ಮಳೆಯಿಂದ ಜಿಲ್ಲೆಯ ಅನೇಕ ಕಡೆಯಲ್ಲಿ ಮಳೆ ಈಗಾಗಲೇ ಸಾಕಷ್ಟು ಅವಾಂತರ ಸೃಷ್ಟಿ ಮಾಡಿದೆ. ಇನ್ನೂ ಸಹ ಮೂರು ದಿನಗಳ ಕಾಲ ಜಿಲ್ಲಾದ್ಯಂತ ವ್ಯಾಪಕ ಮಳೆ ಉಂಟಾಗಲಿದ್ದು, ತಗ್ಗು ಪ್ರದೇಶದ ಜನ ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ
- ಅಪ್ರಾಪ್ತೆಗೆ ಕಿರುಕುಳ ಆರೋಪ: ಪಿಎಸ್ಐ ಬಂಧನ”

- ನನ್ನ ಹೆಸರನ್ನು ಹಾಳು ಮಾಡುವ ಪ್ರಯತ್ನ – ಶಾಸಕ ದಿನಕರ ಶೆಟ್ಟಿ

- ಕುಮಟಾ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ದಿಢೀರ್ ಭೇಟಿ ಆಸ್ಪತ್ರೆ ಸ್ವಚ್ಛತೆ, ಚಿಕಿತ್ಸಾ ವ್ಯವಸ್ಥೆಗೆ ಮೆಚ್ಚುಗೆ:ಟ್ರಾಮಾ ಸೆಂಟರ್ಗೆ ಅಗತ್ಯ ಸಿಬ್ಬಂದಿ-ಸೌಲಭ್ಯ ಒದಗಿಸುವ ಭರವಸೆ

ಭಾರೀ ಮಳೆ ಆಗಲಿರುವ ಕಾರಣ ಮೀನುಗಾರರು ಮೀನುಗಾರಿಕೆಗಾಗಿ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ಇನ್ನೂ ಜಿಲ್ಲೆಗೆ ಬರುವ ಪ್ರವಾಸಿಗರು ಕಡಲತೀರ ಹಾಗೂ ಜಲಪಾತ ಕಡೆ ಹೋಗದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

