suddibindu.in
ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಬೈತಖೋಲ್ ಮೀನುಗಾರಿಕೆ ಬಂದರಿನ ಬಳಿ ಕುಂದಾಪುರ ಮೂಲದ ವ್ಯಕ್ತಿ ಓರ್ವನ ಶವ ಪತ್ತೆಯಾಗಿದೆ.
ಕುಂದಾಪುರ ಮೂಲದ ಯೋಗೇಶ ಟಿ.ಆರ್ (23) ಮೃತ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಸಮುದ್ರದಲ್ಲಿ ಮೃತ ದೇಹ ತೆಲುತ್ತಿರುವುದನ್ನ ಕಂಡ ಸ್ಥಳೀಯ ಮೀನುಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.ಬಳಿಕ ಸ್ಥಳಕ್ಕೆ ಬಂದ ಕಾರವಾರ ನಗರ ಠಾಣೆಯ ಪೊಲೀಸರು ಮೃತ ದೇಹವನ್ನ ಸಮುದ್ರದಿಂದ ಮೇಲಕ್ಕೆತ್ತಿ ಪರಿಶೀನೆ ನಡೆಸಿದ್ದಾರೆ.
ಇದನ್ನೂ ಓದಿ
- ಸಚಿವ ಸಂಪುಟ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ.? ಇಲ್ಲಿದೆ ಸಂಪೂರ್ಣ ಪಟ್ಟಿ
- ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಳಿ ಪೆನ್ಡ್ರೈವ್, ಮೊಬೈಲ್ ಪತ್ತೆ!
- ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗಕ್ಕೆ ಅಧಿಸೂಚನೆ: ರೂಪಾಲಿ ನಾಯ್ಕ ಸ್ವಾಗತ
ಈತ ಕುಂದಾಪುರದ ವ್ಯಕ್ತಿ ಎನ್ನುವುದು ಪತ್ತೆಯಾಗಿದೆ. ಈತ ನಾಪತ್ತೆ ಆಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಜೂನ್ 19ರಂದು ಪ್ರಕರಣ ದಾಖಲಾಗಿತ್ತು. ಇದೀಗ ಮೃತ ದೇಹ ಪತ್ತೆಯಾಗಿರುವ ಬಗ್ಗೆ ಕಾರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.




