suddibindu.in
ಕಾರವಾರ: ದಯವಿಟ್ಟು 650 ಕೋಟಿ ವೆಚ್ಚದ ಯೋಜನೆಯನ್ನ ಕೈ ಬಿಡಿ ಎಂದು ಕುಮಟಾ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ ಕಾರವಾರ ಡಿ.ಸಿ.ಎಫ್ ರವಿಶಂಕರ್ ಅವರಿಗೆ ಮನವಿ ಮಾಡಿಕೊಂಡರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆಯಲಾಯಿತು.ಈ ಸಂಧರ್ಭದಲ್ಲಿ ಸಮುದ್ರಕ್ಕೆ ಪ್ಲಾಸ್ಟಿಕ್ ಸೇರಂತೆ ತಡೆಯುವ ಸುಮಾರು 650 ಕೋಟಿ ವೆಚ್ಚದ ಯೋಜನೆ ಬಗ್ಗೆ ಚರ್ಚೆ ಆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ದಿನಕರ ಶೆಟ್ಟಿ ದಯವಿಟ್ಟು ಈ ಯೋಜನೆ ಜಾರಿಗೆ ತರಬೇಡಿ. ನಾನು ಬೇರೆ ಏನು ಹೇಳುವುದಿಲ್ಲ. ಯೋಜನೆ ಕೈ ಬಿಡುವುದು ಒಳ್ಳೆಯದು ಎಂದು ಡಿ.ಸಿ.ಎಫ್ ಗೆ ಮನವಿ ಮಾಡಿಕೊಂಡರು.
ಇದನ್ನೂ ಓದಿ
- ಕಾಸರಗೋಡು ಬಳಿ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಓರ್ವ ಕಾರ್ಮಿಕ ಸಾವು, ಹಲವರಿಗೆ ಗಾಯ
- ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜಕೀಯ ಸಮೀಕರಣ: ಕುಮಾರಸ್ವಾಮಿ ಸುಪ್ರಿಂ
- ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ — ಹೆದ್ದಾರಿ ತಡೆದು ಆಕ್ರೋಶ
ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ತಡೆಯಲು ಕೈ ಗೊಂಡ ಯೋಜನೆ ಬಗ್ಗೆ ದಿನಕರ ಶೆಟ್ಟಿ ವಿರೋಧಕ್ಕೆ ಇಳಿದಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.






 
 
 
 

