suddibindu.in
Kalaburagi:ಕಲಬುರಗಿ : ಕಲ್ಲುಗಣಿಯ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರಂತ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ನಡೆದಿದೆ.
ರಾವೂರ್ ಗ್ರಾಮದ ಐದು ವರ್ಷದ ಭುವನ್ ಹಾಗೂ ಆರು ವರ್ಷದ ದೇವು ಮೃತ ಬಾಲಕರಾಗಿದ್ದಾರೆ.ಈ ಇಬ್ಬರೂ ಯುವಕರು ಸೇರಿಕೊಂಡು ಆಟವಾಡಲು ಕಲ್ಲುಗಣಿ ಹೊಂಡದ ಬಳಿ ಆಡವಾಡುತ್ತಿದ್ದರು ಎನ್ನಲಾಗಿದ್ದು, ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಹತ್ತಿರದ ಕಲ್ಲುಗಣಿಯ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇವರು ರಾವೂರ್ ಗ್ರಾಮದ ವಿವೇಕಾನಂದ ಶಿಶುವಿಹಾರ ಶಾಲೆಯಲ್ಲಿ ಓದುತ್ತಿದ್ದರು.
ಇದನ್ನೂ ಓದಿ
- ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ
- ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ
- ಹೊನ್ನಾವರ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹17.08 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಇಬ್ಬರ ಬಂಧನ
ಭುವನ್ ಹಾಗೂ ದೇವು ಇಬ್ಬರು ಒಟ್ಟಾಗಿ ಆಟವಾಡಲು ತೆರಳಿದ್ದಾರೆ. ಬಹಳ ಸಮಯವಾದರೂ ವಾಪಸ್ ಬಾರದೇ ಇದ್ದಾಗ ಸಂಬಂಧಿಕರು ಹುಡುಕಲು ಆರಂಭಿಸಿದ್ದಾರೆ. ಬಾಲಕನ ಬಟ್ಟೆ ಹಾಗೂ ಆಟವಾಡಲು ಬಳಸುತ್ತಿದ್ದ ಟೈಯರ್ ಗಾಲಿಯು ಗಣಿಯ ಪಕ್ಕದಲ್ಲಿ ಪತ್ತೆಯಾಗಿತ್ತು. ಅನುಮಾನಗೊಂಡು ಹುಡುಕಲು ಆರಂಭಿಸಿದಾಗ ಮೃತ ಸ್ಥಿತಿಯಲ್ಲಿ ಇಬ್ಬರು ಬಾಲಕರ ಶವಗಳು ಪತ್ತೆಯಾಗಿದೆ.ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




